ಬೆಂ.ಗ್ರಾ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: 60ಕ್ಕೂ ಹೆಚ್ಚು ಸಾಧಕ ಗಣ್ಯರಿಗೆ ಪುರಸ್ಕಾರ

ತಾಲೂಕಿನ ಕನಸವಾಡಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಭಾನುವಾರ ಸಂಜೆ ಜಿ.ಗೋಪಿನಾಥ್‌ ವೇದಿಕೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ ಮಾತನಾಡಿ, ಎರಡು ದಿನಗಳ ಕಾಲ ನಾಡಿನ ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಕುರಿತು ವಿವಿಧ ಸ್ತರಗಳಲ್ಲಿ ಗಂಭೀರ ಚರ್ಚೆಗಳು ನಡೆದಿವೆ. ಸಾಹಿತ್ಯದ ಆಲೋಚನೆಗಳು ವಿಭಿನ್ನ ವಲಯಗಳನ್ನು ಮುಟ್ಟುವ ಹೊಸ ಮಾದರಿಯೊಂದು ಸಮ್ಮೇಳನದ ಮೂಲಕ ಹೊರಬಂದಿದೆ. ಸಾಂಸ್ಕೃತಿಕ ಮತ್ತು ಸಾಹಿತ್ಯ ವಲಯದ ಸಮನ್ವಯದ ವೇದಿಕೆಯಂತಿದ್ದ ಸಮ್ಮೇಳನದಲ್ಲಿ ಸದಭಿರುಚಿಯ ವಿಶ್ಲೇಷಣೆಗಳು ನಡೆದಿವೆ. ಎಲ್ಲ ಹಂತಗಳಲ್ಲೂ ಸಮ್ಮೇಳನ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಘಟಕಗಳು, ಸ್ಥಳೀಯವಾಗಿ ಆಯೋಜನೆಯ ನೇತೃತ್ವ ವಹಿಸಿದ್ದ ಎಲ್ಲ ಸಾಹಿತ್ಯಾಸಕ್ತರು ಅಭಿನಂದನಾರ್ಹರು ಎಂದು ತಿಳಿಸಿದರು.

60ಕ್ಕೂ ಹೆಚ್ಚು ಗಣ್ಯರಿಗೆ ಸನ್ಮಾನ:

ಸಮಾರೋಪ ಸಮಾರಂಭದ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಮತ್ತು ದೇವನಹಳ್ಳಿ ತಾಲೂಕಿನ 40ಕ್ಕೂ ಹೆಚ್ಚು ಗಣ್ಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಧುರೆ ಹೋಬಳಿಯ ಹಿರಿಯ ಮುಖಂಡರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 20ಕ್ಕೂ ಹೆಚ್ಚು ಗಣ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಪಂ ಮಾಜಿ ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಕೋಶಾಧ್ಯಕ್ಷ ಮುನಿರಾಜು, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಹೋಬಳಿ ಅಧ್ಯಕ್ಷ ಜಿ.ಸುರೇಶ್, ಹೊಂಗಿರಣ ಸಮಾನ ಮನಸ್ಕರ ವೇದಿಕೆಯ ವೆಂಕಟಾಚಲಪತಿ, ನಿವೃತ್ತ ಮುಖ್ಯಶಿಕ್ಷಕ ರಾಮಯ್ಯ, ರವಿಕುಮಾರ್, ನಿವೃತ್ತ ಕಾರಾಗೃಹ ಅಧೀಕ್ಷಕ ಲಕ್ಷ್ಮೀನಾರಾಯಣ್, ವೀಣೆ ತಯಾರಕ ಉಮೇಶ್, ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್‌ ಅಧ್ಯಕ್ಷ ಡಿ.ಶ್ರೀಕಾಂತ ಸೇರಿದಂತೆ ಮಧುರೆ ಹೋಬಳಿಯ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

9 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

15 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

15 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

19 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

20 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago