ಬೆಂ.ಗ್ರಾ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: 60ಕ್ಕೂ ಹೆಚ್ಚು ಸಾಧಕ ಗಣ್ಯರಿಗೆ ಪುರಸ್ಕಾರ

ತಾಲೂಕಿನ ಕನಸವಾಡಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಭಾನುವಾರ ಸಂಜೆ ಜಿ.ಗೋಪಿನಾಥ್‌ ವೇದಿಕೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ ಮಾತನಾಡಿ, ಎರಡು ದಿನಗಳ ಕಾಲ ನಾಡಿನ ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಕುರಿತು ವಿವಿಧ ಸ್ತರಗಳಲ್ಲಿ ಗಂಭೀರ ಚರ್ಚೆಗಳು ನಡೆದಿವೆ. ಸಾಹಿತ್ಯದ ಆಲೋಚನೆಗಳು ವಿಭಿನ್ನ ವಲಯಗಳನ್ನು ಮುಟ್ಟುವ ಹೊಸ ಮಾದರಿಯೊಂದು ಸಮ್ಮೇಳನದ ಮೂಲಕ ಹೊರಬಂದಿದೆ. ಸಾಂಸ್ಕೃತಿಕ ಮತ್ತು ಸಾಹಿತ್ಯ ವಲಯದ ಸಮನ್ವಯದ ವೇದಿಕೆಯಂತಿದ್ದ ಸಮ್ಮೇಳನದಲ್ಲಿ ಸದಭಿರುಚಿಯ ವಿಶ್ಲೇಷಣೆಗಳು ನಡೆದಿವೆ. ಎಲ್ಲ ಹಂತಗಳಲ್ಲೂ ಸಮ್ಮೇಳನ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಘಟಕಗಳು, ಸ್ಥಳೀಯವಾಗಿ ಆಯೋಜನೆಯ ನೇತೃತ್ವ ವಹಿಸಿದ್ದ ಎಲ್ಲ ಸಾಹಿತ್ಯಾಸಕ್ತರು ಅಭಿನಂದನಾರ್ಹರು ಎಂದು ತಿಳಿಸಿದರು.

60ಕ್ಕೂ ಹೆಚ್ಚು ಗಣ್ಯರಿಗೆ ಸನ್ಮಾನ:

ಸಮಾರೋಪ ಸಮಾರಂಭದ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಮತ್ತು ದೇವನಹಳ್ಳಿ ತಾಲೂಕಿನ 40ಕ್ಕೂ ಹೆಚ್ಚು ಗಣ್ಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಧುರೆ ಹೋಬಳಿಯ ಹಿರಿಯ ಮುಖಂಡರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 20ಕ್ಕೂ ಹೆಚ್ಚು ಗಣ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಪಂ ಮಾಜಿ ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಕೋಶಾಧ್ಯಕ್ಷ ಮುನಿರಾಜು, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಹೋಬಳಿ ಅಧ್ಯಕ್ಷ ಜಿ.ಸುರೇಶ್, ಹೊಂಗಿರಣ ಸಮಾನ ಮನಸ್ಕರ ವೇದಿಕೆಯ ವೆಂಕಟಾಚಲಪತಿ, ನಿವೃತ್ತ ಮುಖ್ಯಶಿಕ್ಷಕ ರಾಮಯ್ಯ, ರವಿಕುಮಾರ್, ನಿವೃತ್ತ ಕಾರಾಗೃಹ ಅಧೀಕ್ಷಕ ಲಕ್ಷ್ಮೀನಾರಾಯಣ್, ವೀಣೆ ತಯಾರಕ ಉಮೇಶ್, ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್‌ ಅಧ್ಯಕ್ಷ ಡಿ.ಶ್ರೀಕಾಂತ ಸೇರಿದಂತೆ ಮಧುರೆ ಹೋಬಳಿಯ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…

48 minutes ago

ಯುಗಾದಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಇಸ್ಪೀಟ್ ಆಟ:‌ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಠಾಣೆಗೆ ಕರೆತಂದಿದ್ದವರ ಪೈಕಿ ಕಾಂತರಾಜು ಅನುಮಾನಾಸ್ಪದ ಸಾವು: ಠಾಣೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ…

6 hours ago

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

1 day ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

1 day ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

1 day ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

1 day ago