ತಾಲೂಕಿನ ಕನಸವಾಡಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಭಾನುವಾರ ಸಂಜೆ ಜಿ.ಗೋಪಿನಾಥ್ ವೇದಿಕೆಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ ಮಾತನಾಡಿ, ಎರಡು ದಿನಗಳ ಕಾಲ ನಾಡಿನ ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಕುರಿತು ವಿವಿಧ ಸ್ತರಗಳಲ್ಲಿ ಗಂಭೀರ ಚರ್ಚೆಗಳು ನಡೆದಿವೆ. ಸಾಹಿತ್ಯದ ಆಲೋಚನೆಗಳು ವಿಭಿನ್ನ ವಲಯಗಳನ್ನು ಮುಟ್ಟುವ ಹೊಸ ಮಾದರಿಯೊಂದು ಸಮ್ಮೇಳನದ ಮೂಲಕ ಹೊರಬಂದಿದೆ. ಸಾಂಸ್ಕೃತಿಕ ಮತ್ತು ಸಾಹಿತ್ಯ ವಲಯದ ಸಮನ್ವಯದ ವೇದಿಕೆಯಂತಿದ್ದ ಸಮ್ಮೇಳನದಲ್ಲಿ ಸದಭಿರುಚಿಯ ವಿಶ್ಲೇಷಣೆಗಳು ನಡೆದಿವೆ. ಎಲ್ಲ ಹಂತಗಳಲ್ಲೂ ಸಮ್ಮೇಳನ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಘಟಕಗಳು, ಸ್ಥಳೀಯವಾಗಿ ಆಯೋಜನೆಯ ನೇತೃತ್ವ ವಹಿಸಿದ್ದ ಎಲ್ಲ ಸಾಹಿತ್ಯಾಸಕ್ತರು ಅಭಿನಂದನಾರ್ಹರು ಎಂದು ತಿಳಿಸಿದರು.
60ಕ್ಕೂ ಹೆಚ್ಚು ಗಣ್ಯರಿಗೆ ಸನ್ಮಾನ:
ಸಮಾರೋಪ ಸಮಾರಂಭದ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಮತ್ತು ದೇವನಹಳ್ಳಿ ತಾಲೂಕಿನ 40ಕ್ಕೂ ಹೆಚ್ಚು ಗಣ್ಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಧುರೆ ಹೋಬಳಿಯ ಹಿರಿಯ ಮುಖಂಡರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 20ಕ್ಕೂ ಹೆಚ್ಚು ಗಣ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಪಂ ಮಾಜಿ ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಕೋಶಾಧ್ಯಕ್ಷ ಮುನಿರಾಜು, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಹೋಬಳಿ ಅಧ್ಯಕ್ಷ ಜಿ.ಸುರೇಶ್, ಹೊಂಗಿರಣ ಸಮಾನ ಮನಸ್ಕರ ವೇದಿಕೆಯ ವೆಂಕಟಾಚಲಪತಿ, ನಿವೃತ್ತ ಮುಖ್ಯಶಿಕ್ಷಕ ರಾಮಯ್ಯ, ರವಿಕುಮಾರ್, ನಿವೃತ್ತ ಕಾರಾಗೃಹ ಅಧೀಕ್ಷಕ ಲಕ್ಷ್ಮೀನಾರಾಯಣ್, ವೀಣೆ ತಯಾರಕ ಉಮೇಶ್, ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ಅಧ್ಯಕ್ಷ ಡಿ.ಶ್ರೀಕಾಂತ ಸೇರಿದಂತೆ ಮಧುರೆ ಹೋಬಳಿಯ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…