ತಾಲೂಕಿನ ಕನಸವಾಡಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಭಾನುವಾರ ಸಂಜೆ ಜಿ.ಗೋಪಿನಾಥ್ ವೇದಿಕೆಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ ಮಾತನಾಡಿ, ಎರಡು ದಿನಗಳ ಕಾಲ ನಾಡಿನ ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಕುರಿತು ವಿವಿಧ ಸ್ತರಗಳಲ್ಲಿ ಗಂಭೀರ ಚರ್ಚೆಗಳು ನಡೆದಿವೆ. ಸಾಹಿತ್ಯದ ಆಲೋಚನೆಗಳು ವಿಭಿನ್ನ ವಲಯಗಳನ್ನು ಮುಟ್ಟುವ ಹೊಸ ಮಾದರಿಯೊಂದು ಸಮ್ಮೇಳನದ ಮೂಲಕ ಹೊರಬಂದಿದೆ. ಸಾಂಸ್ಕೃತಿಕ ಮತ್ತು ಸಾಹಿತ್ಯ ವಲಯದ ಸಮನ್ವಯದ ವೇದಿಕೆಯಂತಿದ್ದ ಸಮ್ಮೇಳನದಲ್ಲಿ ಸದಭಿರುಚಿಯ ವಿಶ್ಲೇಷಣೆಗಳು ನಡೆದಿವೆ. ಎಲ್ಲ ಹಂತಗಳಲ್ಲೂ ಸಮ್ಮೇಳನ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಘಟಕಗಳು, ಸ್ಥಳೀಯವಾಗಿ ಆಯೋಜನೆಯ ನೇತೃತ್ವ ವಹಿಸಿದ್ದ ಎಲ್ಲ ಸಾಹಿತ್ಯಾಸಕ್ತರು ಅಭಿನಂದನಾರ್ಹರು ಎಂದು ತಿಳಿಸಿದರು.
60ಕ್ಕೂ ಹೆಚ್ಚು ಗಣ್ಯರಿಗೆ ಸನ್ಮಾನ:
ಸಮಾರೋಪ ಸಮಾರಂಭದ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಮತ್ತು ದೇವನಹಳ್ಳಿ ತಾಲೂಕಿನ 40ಕ್ಕೂ ಹೆಚ್ಚು ಗಣ್ಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಧುರೆ ಹೋಬಳಿಯ ಹಿರಿಯ ಮುಖಂಡರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 20ಕ್ಕೂ ಹೆಚ್ಚು ಗಣ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಮ್ಮೇಳನದ ಸರ್ವಾಧ್ಯಕ್ಷ ಟಿ.ಕೆಂಪಣ್ಣ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಪಂ ಮಾಜಿ ಅಧ್ಯಕ್ಷ ಎಂ.ಲಕ್ಷ್ಮೀಪತಯ್ಯ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಕೋಶಾಧ್ಯಕ್ಷ ಮುನಿರಾಜು, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಹೋಬಳಿ ಅಧ್ಯಕ್ಷ ಜಿ.ಸುರೇಶ್, ಹೊಂಗಿರಣ ಸಮಾನ ಮನಸ್ಕರ ವೇದಿಕೆಯ ವೆಂಕಟಾಚಲಪತಿ, ನಿವೃತ್ತ ಮುಖ್ಯಶಿಕ್ಷಕ ರಾಮಯ್ಯ, ರವಿಕುಮಾರ್, ನಿವೃತ್ತ ಕಾರಾಗೃಹ ಅಧೀಕ್ಷಕ ಲಕ್ಷ್ಮೀನಾರಾಯಣ್, ವೀಣೆ ತಯಾರಕ ಉಮೇಶ್, ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ ಅಧ್ಯಕ್ಷ ಡಿ.ಶ್ರೀಕಾಂತ ಸೇರಿದಂತೆ ಮಧುರೆ ಹೋಬಳಿಯ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…