ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿ ನಡೆಯುವ ಬೆಂಗಳೂರು ಗ್ರಾಮಾಂತರ ಜಿಲ್ಲಾ 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ, ಖ್ಯಾತ ಛಾಯಾಚಿತ್ರ ಕಲಾವಿದ, ಸಾಕ್ಷ್ಯಚಿತ್ರ ನಿರ್ದೇಶಕ ಟಿ.ಕೆಂಪಣ್ಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಭೆಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರನ್ನು ಪ್ರಕಟಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಕೋಶಾಧ್ಯಕ್ಷ ಡಾ.ಮುನಿರಾಜು, ಸಂಘಟನಾ ಕಾರ್ಯದರ್ಶಿಗಳಾದ ಶರಣಯ್ಯ ಹಿರೇಮಠ, ಚಂದ್ರಶೇಖರ್, ದೊಡ್ಡಬಳ್ಳಾಪುರ ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನೆಲಮಂಗಲ ತಾಲ್ಲೂಕು ಅಧ್ಯಕ್ಷ ಪ್ರಕಾಶಮೂರ್ತಿ, ಮಧುರೆ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್,ಪ್ರತಿನಿಧಿ ಚಂದ್ರಶೇಖರ್ ಮುಂತಾದವರು ಭಾಗವಹಿಸಿದ್ದರು.
ಮನುಷ್ಯ ಕಂಡುಕೊಂಡ ಕಲಾತ್ಮಕ ಅಭಿವ್ಯಕ್ತಿಗಳಲ್ಲಿ ಛಾಯಾಗ್ರಹಣವೂ ಒಂದು. ಮಾತು ತೇಲಿ ಹೋದೀತು, ಬರವಣಿಗೆಯು ಅರ್ಥವಾಗದೆ ಉಳಿದೀತು, ಆದರೆ ಛಾಯಾಚಿತ್ರವು ಮಾತ್ರ ಎಲ್ಲೋ ನಡೆದ ಘಟನೆಯನ್ನು ಮತ್ತೆ ನಮ್ಮ ಕಣ್ಣ ಮುಂದೆ ಜೀವಂತ ತೋರಿಸುವ ಅನನ್ಯ ಸಾಮರ್ಥ್ಯ ಹೊಂದಿದೆ. ಈ ಮೂಲಕ ಜಗತ್ತಿನ ಹಲವು ಅಪರೂಪದ ಪ್ರಕರಣಗಳನ್ನು ಹಲವು ತಲೆಮಾರುಗಳ ನಂತರ ಇಂದಿಗೂ ಕಾಣಲು ಸಾಧ್ಯವಾಗಿದೆ. ಇಂಥ ಪ್ರಭಾವಿ ದೃಶ್ಯ ಮಾಧ್ಯಮವನ್ನು ಹಿರಿಯ ಛಾಯಾಗ್ರಾಹಕ ಟಿ.ಕೆಂಪಣ್ಣ ಬದುಕಿನ ಮುಖ್ಯ ಪ್ರವೃತ್ತಿಯಾಗಿ ಸ್ವೀಕರಿಸಿದವರು ಎನ್ನುವುದು ವಿಶೇಷ.
ವಾರ್ತಾ ಮತ್ತು ಪ್ರಚಾರ ಇಲಾಖೆಯಲ್ಲಿ ‘ಛಾಯಾ ಮತ್ತು ಚಲನಚಿತ್ರ’ ಅಧಿಕಾರಿಯಾಗಿ ಹಲವು ವರ್ಷಗಳ ಕಾಲ ಕೆಂಪಣ್ಣ ಅವರು ಸೇವೆ ಸಲ್ಲಿಸಿದ್ದಾರೆ. ಸರ್ಕಾರ ಜಾರಿಗೆ ತರುವ ಕಲ್ಯಾಣ ಯೋಜನೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸುವುದರೊಂದಿಗೆ ನಾಗರಿಕರಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸುವ ನಿಟ್ಟಿನಲ್ಲಿಯೂ ಅವರು ಶ್ರಮಿಸಿದ್ದಾರೆ. ಇವರು ಸ್ವತಃ ಚಿತ್ರಕಥೆ ಬರೆದು ನಿರ್ದೇಶಿಸಿದ ಸುಮಾರು 25 ಕ್ಕೂ ಹೆಚ್ಚು ಸಾಕ್ಷ್ಯಚಿತ್ರಗಳು ದೂರದರ್ಶನದಲ್ಲಿ ಪ್ರಸಾರವಾಗಿವೆ.
‘ಕಲ್ಲರಳಿ ಕಲೆಯಾಗಿ’ ಹಾಗೂ ‘ಕರ್ನಾಟಕದ ಪ್ರಾಚೀನ ದೇವಾಲಯಗಳು’ ಶೀರ್ಷಿಕೆಯಡಿ ವಿವಿಧೆಡೆ ಛಾಯಾಚಿತ್ರ ಪ್ರದರ್ಶನಗಳನ್ನು ಏರ್ಪಡಿಸಿದ್ದರು. ‘ಕರ್ನಾಟಕದ ರಾಜಮನೆತನಗಳು ವಾಸ್ತುಶಿಲ್ಪ ಪರಂಪರೆಗೆ ನೀಡಿರುವ ಕೊಡುಗೆಗಳ ಬಗ್ಗೆ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವುದು ನನ್ನ ಉದ್ದೇಶ’ ಎಂದು ಕೆಂಪಣ್ಣ ಅವರು ವಿನಯದಿಂದ ಹೇಳುತ್ತಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ಸ್ವಚ್ಛ ಭಾರತ್ ಅಭಿಯಾನ’ ಯೋಜನೆಗೆ ಸಂಬಂಧಿಸಿದಂತೆ ಕೆಂಪಣ್ಣ ಅವರು ರೂಪಿಸಿದ ‘ಲಾವಣ್ಯ – ಎ ಡ್ರೀಮ್ ಕಮ್ ಟ್ರೂ’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಮಂಡ್ಯ ಜಿಲ್ಲೆ ಕಾಮೇಗೌಡರ ಮಳೆನೀರು ಸಂರಕ್ಷಣೆ ಪ್ರಯತ್ನದ ಕುರಿತು ನಿರ್ದೇಶಿಸಿರುವ ‘ಕಾಮೇಗೌಡ – ಎ ಯೂನಿಕ್ ರೋಲ್ ಮಾಡೆಲ್’ ಇವರ ‘ಸೈನ್ಸ್ ಮಿರಾಕಲ್ಸ್’ ಹಾಗೂ ‘ಗ್ರಾಮ ಸ್ವರಾಜ್ಯ’ ಸಾಕ್ಷ್ಯಚಿತ್ರಕ್ಕೂ ರಾಷ್ಟ್ರೀಯ ಮಾನ್ಯತೆ ದೊರೆತಿದೆ.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…