ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ತಾಣಗಳಾದ ದೇವನಹಳ್ಳಿ ತಾಲ್ಲೂಕಿನ ಕೋಟೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಚಿಕ್ಕ ಮಧುರೆಯ ಶನಿ ಮಹಾತ್ಮ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಗಂಗಾಧರೇಶ್ವರ ಸ್ವಾಮಿ ಮತ್ತು ಹೊನ್ನಾದೇವಿ ದೇವಸ್ಥಾನಗಳನ್ನು ಒಳಗೊಂಡ ಪ್ರವಾಸಿ ತಾಣಗಳಿಗೆ ಬೆಂಗಳೂರು ಗ್ರಾಮಾಂತರ ಪ್ರವಾಸ(ಬಿ.ಆರ್.ಟಿ), ವ್ಯವಸ್ಥಿತ ಪ್ರವಾಸವನ್ನು ಕೆ.ಎಸ್.ಡಿ.ಟಿ.ಸಿ ನಿಗಮದಿಂದ ಆಯೋಜನೆ ಮಾಡಲಾಗಿದ್ದು, ಆಸಕ್ತ ಪ್ರವಾಸಿಗರು ಆನ್ಲೈನ್ ಮೂಲಕ ಬುಕಿಂಗ್ ಮಾಡಬಹುದಾಗಿದೆ.
ಪ್ರತೀ ದಿನ ಯಶವಂತಪುರ ಕೆಎಸ್ಟಿಡಿಸಿ ಕಚೇರಿಯಿಂದ ಬೆಳಿಗ್ಗೆ 7 ಗಂಟೆಗೆ ಬಸ್ ತೆರಳಿ ಸುಮಾರು 8:30 ಕ್ಕೆ ದೇವನಹಳ್ಳಿ ಕೋಟೆಗೆ ತಲುಪುತ್ತದೆ, 10 ಗಂಟೆಗೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ, 11:45ಕ್ಕೆ ಚಿಕ್ಕ ಮಧುರೆ ಹಾಗೂ ಶನಿ ಮಹಾತ್ಮ ದೇವಸ್ಥಾನಕ್ಕೆ, ಮಧ್ಯಾಹ್ನದ ಊಟದ ಸಮಯ 1:30 ರಿಂದ 2 ಗಂಟೆಯವರೆಗೆ. 2:30 ಕ್ಕೆ ಶಿವಗಂಗೆಯ ಗಂಗಾಧರೇಶ್ವರ ಮತ್ತು ಹೊನ್ನಾದೇವಿ ದೇವಾಲಯಕ್ಕೆ, ಕೊನೆಯದಾಗಿ 6 ಗಂಟೆಗೆ ಯಶವಂತಪುರ ಕೆಎಸ್ಟಿಡಿಸಿ ಕಚೇರಿಗೆ ವಾಪಸ್ಸಾಗುವುದು.
ಆಸಕ್ತ ಪ್ರವಾಸಿಗರು ಕೆ.ಎಸ್.ಡಿ.ಟಿ.ಸಿ ಯ ಅಧಿಕೃತ ಜಾಲತಾಣವಾದ www.kstdc.co ಮುಖಾಂತರ ಟಿಕೆಟ್ ಬುಕ್ ಮಾಡಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-43344334/8970650070 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…