ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ತಾಣಗಳಾದ ದೇವನಹಳ್ಳಿ ತಾಲ್ಲೂಕಿನ ಕೋಟೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಚಿಕ್ಕ ಮಧುರೆಯ ಶನಿ ಮಹಾತ್ಮ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಗಂಗಾಧರೇಶ್ವರ ಸ್ವಾಮಿ ಮತ್ತು ಹೊನ್ನಾದೇವಿ ದೇವಸ್ಥಾನಗಳನ್ನು ಒಳಗೊಂಡ ಪ್ರವಾಸಿ ತಾಣಗಳಿಗೆ ಬೆಂಗಳೂರು ಗ್ರಾಮಾಂತರ ಪ್ರವಾಸ(ಬಿ.ಆರ್.ಟಿ), ವ್ಯವಸ್ಥಿತ ಪ್ರವಾಸವನ್ನು ಕೆ.ಎಸ್.ಡಿ.ಟಿ.ಸಿ ನಿಗಮದಿಂದ ಆಯೋಜನೆ ಮಾಡಲಾಗಿದ್ದು, ಆಸಕ್ತ ಪ್ರವಾಸಿಗರು ಆನ್ಲೈನ್ ಮೂಲಕ ಬುಕಿಂಗ್ ಮಾಡಬಹುದಾಗಿದೆ.
ಪ್ರತೀ ದಿನ ಯಶವಂತಪುರ ಕೆಎಸ್ಟಿಡಿಸಿ ಕಚೇರಿಯಿಂದ ಬೆಳಿಗ್ಗೆ 7 ಗಂಟೆಗೆ ಬಸ್ ತೆರಳಿ ಸುಮಾರು 8:30 ಕ್ಕೆ ದೇವನಹಳ್ಳಿ ಕೋಟೆಗೆ ತಲುಪುತ್ತದೆ, 10 ಗಂಟೆಗೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ, 11:45ಕ್ಕೆ ಚಿಕ್ಕ ಮಧುರೆ ಹಾಗೂ ಶನಿ ಮಹಾತ್ಮ ದೇವಸ್ಥಾನಕ್ಕೆ, ಮಧ್ಯಾಹ್ನದ ಊಟದ ಸಮಯ 1:30 ರಿಂದ 2 ಗಂಟೆಯವರೆಗೆ. 2:30 ಕ್ಕೆ ಶಿವಗಂಗೆಯ ಗಂಗಾಧರೇಶ್ವರ ಮತ್ತು ಹೊನ್ನಾದೇವಿ ದೇವಾಲಯಕ್ಕೆ, ಕೊನೆಯದಾಗಿ 6 ಗಂಟೆಗೆ ಯಶವಂತಪುರ ಕೆಎಸ್ಟಿಡಿಸಿ ಕಚೇರಿಗೆ ವಾಪಸ್ಸಾಗುವುದು.
ಆಸಕ್ತ ಪ್ರವಾಸಿಗರು ಕೆ.ಎಸ್.ಡಿ.ಟಿ.ಸಿ ಯ ಅಧಿಕೃತ ಜಾಲತಾಣವಾದ www.kstdc.co ಮುಖಾಂತರ ಟಿಕೆಟ್ ಬುಕ್ ಮಾಡಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-43344334/8970650070 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…