ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದೊಡ್ಡಬಳ್ಳಾಪುರದವರಾದ ಸ್ವಾತಂತ್ರ್ಯ ಸೇನಾನಿ ಟಿ.ಸಿದ್ದಲಿಂಗಯ್ಯ ಮತ್ತು ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರನ್ನು ಉಲ್ಲೇಖ ಮಾಡಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಮಂಡ್ಯ ಜಿಲ್ಲೆಯ ಶಿವಪುರ ಧ್ವಜ ಸತ್ಯಾಗ್ರಹ ಘಟನೆಯನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ ಸ್ವಾತಂತ್ರ್ಯ ಹೋರಾಟಗಾರ ಟಿ.ಸಿದ್ದಲಿಂಗಯ್ಯ ಅವರ ನೇತೃತ್ವದ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರ ವಿಚಾರಧಾರೆಗಳನ್ನು ಸಹ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದರು.
ಸಮ್ಮೇಳನಕ್ಕೆ ಒತ್ತಾಯ :- ಮುಂದಿನ 88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು ಒತ್ತಾಯಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ ಅಖಿಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನಿವೃತ್ತ ಅಧ್ಯಾಪಕ. ವಿ.ಎಸ್.ಹೆಗಡೆ, ಶಿಕ್ಷಕರುಗಳಾದ ಎಚ್.ಎನ್.ಪ್ರಕಾಶ್, ಕೋದಂಡರಾಮ್, ಸಿ.ಅಣ್ಣಯ್ಯ ಮುಂತಾದವರು ಭಾಗವಹಿಸಿದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…