ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದೊಡ್ಡಬಳ್ಳಾಪುರದವರಾದ ಸ್ವಾತಂತ್ರ್ಯ ಸೇನಾನಿ ಟಿ.ಸಿದ್ದಲಿಂಗಯ್ಯ ಮತ್ತು ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರನ್ನು ಉಲ್ಲೇಖ ಮಾಡಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಮಂಡ್ಯ ಜಿಲ್ಲೆಯ ಶಿವಪುರ ಧ್ವಜ ಸತ್ಯಾಗ್ರಹ ಘಟನೆಯನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ ಸ್ವಾತಂತ್ರ್ಯ ಹೋರಾಟಗಾರ ಟಿ.ಸಿದ್ದಲಿಂಗಯ್ಯ ಅವರ ನೇತೃತ್ವದ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರ ವಿಚಾರಧಾರೆಗಳನ್ನು ಸಹ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದರು.
ಸಮ್ಮೇಳನಕ್ಕೆ ಒತ್ತಾಯ :- ಮುಂದಿನ 88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು ಒತ್ತಾಯಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ ಅಖಿಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನಿವೃತ್ತ ಅಧ್ಯಾಪಕ. ವಿ.ಎಸ್.ಹೆಗಡೆ, ಶಿಕ್ಷಕರುಗಳಾದ ಎಚ್.ಎನ್.ಪ್ರಕಾಶ್, ಕೋದಂಡರಾಮ್, ಸಿ.ಅಣ್ಣಯ್ಯ ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…