ಬೆಂ.ಗ್ರಾ. ಜಿಲ್ಲೆಯಲ್ಲಿ 1,70,287 ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ ಅನ್ನಭಾಗ್ಯ ಯೋಜನೆಯಡಿ ರೂ.9,84,50,910 ಕೋಟಿ ನೇರ ನಗದು ಜಮಾ

ಜಿಲ್ಲೆಯಲ್ಲಿ ಎಎವೈನ 14,352 ಮತ್ತು ಪಿಹೆಚ್ ಹೆಚ್ ನ 2,16,657 ಒಟ್ಟು 2,31,009 ಪಡಿತರ ಚೀಟಿಗಳಿದ್ದು, ಆ ಪೈಕಿ ಸಕ್ರಿಯವಾಗಿರುವ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿರುವ ಒಟ್ಟು 1,70,287 ಪಡಿತರ ಚೀಟಿದಾರರಿಗೆ ರೂ. 9,84,50,910 ರೂ ಕೋಟಿ ಹಣವನ್ನು ಡಿಬಿಟಿ ಮುಖಾಂತರ ಅನ್ನಭಾಗ್ಯ ಯೋಜನೆಯಡಿ ಅರ್ಹ ಪಡಿತರ ಕುಟುಂಬಗಳಿಗೆ ನಗದು ವರ್ಗಾವಣೆಯನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಜಿ.ಗಿರಿಜಾ ದೇವಿ ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ, ವಿತರಿಸಲು ಉದ್ದೇಶಿಸಲಾಗಿದ್ದು, 5 ಕೆ.ಜಿ. ಅಕ್ಕಿಯ ಬದಲಾಗಿ ಪಡಿತರ ಚೀಟಿ ಕುಟುಂಬದಲ್ಲಿನ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿಗೆ ರೂ.34 ರಂತೆ ಪ್ರತಿ ಸದಸ್ಯರಿಗೆ ರೂ.170 ರಂತೆ ಪಡಿತರ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗಿದೆ.

ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ 3 ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರಧಾನ್ಯ ಪಡೆಯುತ್ತಿರುವುದರಿಂದ ಅಂತಹ ಕುಟಂಬಗಳಿಗೆ ನಗದು ಸೌಲಭ್ಯ ನೀಡಲಾಗುವುದಿಲ್ಲ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯ ಕುಟಂಬದಲ್ಲಿ 4 ಸದಸ್ಯರಿದ್ದರೆ ಈ ಕುಟುಂಬವು 170 ರೂಗಳನ್ನು, 5 ಸದಸ್ಯರನ್ನು ಹೊಂದಿರುವ ಕುಟುಂಬವು 510 ರೂಗಳನ್ನು, 6 ಸದಸ್ಯರನ್ನು ಹೊಂದಿರುವ ಕುಟುಂಬವು 850 ರೂಗಳನ್ನು ಪಡೆಯುತ್ತದೆ. ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ಅನುಪಾತವು ಮುಂದುವರೆಯುತ್ತದೆ.

ಒಂದು ವೇಳೆ ಪಡಿತರ ಚೀಟಿದಾರರಿಗೆ ಹಣ ಜಮೆ ಆಗದಿದ್ದಲ್ಲಿ , ಆಧಾರ್ ಸಂಖ್ಯೆಗೆ ಚಾಲ್ತಿಯಲ್ಲಿರುವ ಬ್ಯಾಂಕ್‌ ಖಾತೆಗೆ ಲಿಂಕ್ ಮಾಡದೆ ಇರುವದು; ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ; ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದಾಗ; ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದಿರುವಾಗ; ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರವನ್ನು ಪಡೆಯದೆ ಇರುವಾಗ ಹಣ ಜಮೆ ಆಗದಿರುವ ಸಾಧ್ಯತೆಗಳಿರುತ್ತವೆ.

ಈ ನ್ಯೂನತೆಗಳನ್ನು ಜುಲೈ 20 ನೇ ತಾರೀಖಿನೊಳಗೆ ಸರಿಪಡಿಸಿಕೊಂಡಲ್ಲಿ ಆಗಸ್ಟ್ ಮಾಹೆಗೆ ಸಂಬಂಧಿಸಿದಂತೆ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಲು ಕ್ರಮ ವಹಿಸಲಾಗುವುದು.

ಕುಟುಂಬದ ಮುಖ್ಯಸ್ಥರನ್ನು ಗುರುತಿಸಿರುವ, ಆಧಾರ್ ಜೋಡಣೆ ಮಾಡಿರುವ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್‌ ಖಾತೆಯನ್ನು ಹೊಂದಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತ ಪಡಿತರ ಚೀಟಿಯ ಕುಟುಂಬಗಳು ನಗದು ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಜಿಲ್ಲೆಯಲ್ಲಿ ಒಟ್ಟು 34,456 ಪಡಿತರ ಚೀಟಿಗಳಲ್ಲಿ ಕೆಲವು ಕುಟುಂಬದ ಮುಖ್ಯಸ್ಥರು ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿರುವುದಿಲ್ಲ. ಕೆಲವರು ಬ್ಯಾಂಕ್‌ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಿರುವುದಿಲ್ಲ. ಇನ್ನೂ ಕೆಲವರು ಬ್ಯಾಂಕ್ ಖಾತೆಯನ್ನು ತೆರೆದಿರುವುದಿಲ್ಲ.

ಈ ಮಾಹಿತಿಯನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಚುರ ಪಡಿಸಲಾಗಿದೆ, ಈ ರೀತಿ ಡಿಬಿಟಿಯಿಂದ ಜುಲೈ-2023ರ ಮಾಹೆಗೆ ವಂಚಿತರಾಗಿರುವ ಪಡಿತರ ಚೀಟಿದಾರರು ಚಾಲ್ತಿಯಲ್ಲಿರುವ ಬ್ಯಾಂಕ್‌ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿದ ನಂತರ ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವಗೊಳಿಸಿದ ನಂತರ ಹಾಗೂ ಇದುವರೆಗೂ ಕುಟುಂಬದ ಮುಖ್ಯಸ್ಥರು ಸಕ್ರಿಯ ಬ್ಯಾಂಕ್‌ ಖಾತೆ ಹೊಂದಿಲ್ಲದಿದ್ದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾತೆಯನ್ನು ತೆರೆದರೆ ಮುಂದಿನ ಮಾಹೆಯ ಡಿಬಿಟಿಗೆ ಅರ್ಹರಾಗಿರುತ್ತಾರೆ. ಈ ಕಾರ್ಯವನ್ನು ಇದೇ ಜುಲೈ 20ರ ಒಳಗಾಗಿ ಮುಕ್ತಗೊಳಿಸಲು ತಿಳಿಸಲಾಗಿದೆ.

ಎಲ್ಲಾ ನ್ಯಾಯಬೆಲೆ ಅಂಗಡಿಯವರಿಗೆ ಸಭೆಯನ್ನು ಕರೆದು ಸರ್ಕಾರದ ಈ ಕಾರ್ಯಕ್ರಮದ ಬಗ್ಗೆ ತಿಳುವಳಿಕೆ ನೀಡಿ ಕಾರ್ಡುದಾರರಿಗೆ ಸಹಕರಿಸಲು ಹಾಗೂ ಯಶಸ್ವಿಗೊಳಿಸಲು ತಿಳಿಸಲಾಗಿರುತ್ತದೆ.

ಹಣ ವರ್ಗಾವಣೆಯಾದ ಬಗ್ಗೆ ಹಾಗೂ ಇತರೆ ವಿವರಗಳನ್ನು http://ahara.kar.nic.in/status2/ status-of-dbt.aspx ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಜಿ.ಗಿರಿಜಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

4 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

4 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

8 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

20 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

23 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago