ಬೆಂ.ಗ್ರಾ ಜಿಲ್ಲೆಯಲ್ಲಿ 2,90,551 ರೈತರು ಪಶುಸಂಗೋಪನೆಯಲ್ಲಿ ನಿರತ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ 2024-25 ನೇ ಸಾಲಿನ ವಿಸ್ತರಣಾ ಚಟುವಟಿಕೆಗಳ ಹಾಗೂ ಪಶುವೈದ್ಯಕೀಯ ಸಿಬ್ಬಂದಿಯವರ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

21 ನೇ ಜಾನುವಾರು ಗಣತಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ, ಈ ಕಾರ್ಯಕ್ಕೆ ಕಾರಣರಾದ ಪಶು ವೈದ್ಯಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತಾ ಜಾನುವಾರು ಸಾಕಾಣಿಕೆಯಲ್ಲಿ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಜಿಲ್ಲೆ ಉತ್ತಮ ಹೆಸರು ಪಡೆಯಬೇಕು. ಹಾಗಾಗಿ ಪಶು ವೈದ್ಯಾಧಿಕಾರಿಗಳ ಸೇವೆ ಕೂಡ ಮುಖ್ಯ.

ರೈತರಿಗೆ ಜಾನುವಾರು ಸಾಕಾಣಿಕೆ ಕುರಿತಂತೆ ಮಾಹಿತಿ, ತರಬೇತಿ, ಕಾರ್ಯಾಗಾರಗಳನ್ನು ಏರ್ಪಡಿಸಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ, ಪ್ರೊತ್ಸಾಹಧನ ಬಗ್ಗೆ ಮಾಹಿತಿ ನೀಡಿ, ಜಾನುವಾರುಗಳಿಗೆ ತಗುಲುವ ರೋಗಗಳನ್ನು ನಿಯಂತ್ರಿಸಲು ಕಾಲಕಾಲಕ್ಕೆ ಲಸಿಕೆ ಹಾಕಿ ಎಂದರು.

ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಕೊಟ್ಟಿಗೆ ಗೊಬ್ಬರ ಬಳಸಿ ಪೌಷ್ಟಿಕ ಆಹಾರ ಉತ್ಪನ್ನ, ಗುಣಮಟ್ಟದ ತರಕಾರಿ ಬೆಳೆಗಳನ್ನು ಬೆಳೆದು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಗುರಿ ಇದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಸಹಕಾರ ಕೂಡ ಮುಖ್ಯ ಎಂದರು.

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಆವರಣಗಳಲ್ಲಿರುವ ಜಾನುವಾರುಗಳ ಕುಡಿಯುವ ನೀರು ತೊಟ್ಟಿಗಳನ್ನ ಸ್ವಚ್ಚಗೊಳಿಸಿ ನೀರು ಹಾಯಿಸಿ. ಜಿಲ್ಲೆಯ ಯಾವುದೇ ಭಾಗದಿಂದ ಕೂಡ ಕುಡಿಯುವ ನೀರು ಸಮಸ್ಯೆ ಇದೆ ಎಂದು ಸಾರ್ವಜನಿಕರು ನನ್ನ ಬಳಿ ಮನವಿ ಮಾಡಬಾರದು. ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಸೂಕ್ತ ಕ್ರಮ ವಹಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 21ನೇ ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95 ಸಾವಿರ ಮೇಕೆಗಳು ಜಿಲ್ಲೆಯಲ್ಲಿದೆ. 2,93,876 ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆಯನ್ನು ನೀಡಿದ್ದೇವೆ. ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯ ವನ್ನು ಎ ಪಿ ಎಲ್ ಪಡಿತರ ಚೀಟಿಗೆ 50% , ಬಿ ಪಿ ಎಲ್ ಪಡಿತರ ಚೀಟಿಗೆ 75% ನೀಡಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧಾ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇಒ ಶ್ರಿನಾಥ್ ಗೌಡ ಸೇರಿದಂತೆ ಜಿಲ್ಲೆಯ ಪಶುವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

21 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago