ಬೆಂ.ಗ್ರಾ ಜಿಲ್ಲೆಯ ಎಸ್ ಎಸ್ ಎಲ್ ಸಿ ಟಾಪರ್ಸ್ ಗೆ ಸನ್ಮಾನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಐದು ವಿದ್ಯಾರ್ಥಿಗಳನ್ನು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನಿಸಿದರು.

ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಂತರ ಸಿಇಒ ಅವರು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿಯೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ, ಶಿಕ್ಷಕರ ಸಹಕಾರದಿಂದ ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಲು ಸಾಧ್ಯವಾಗಿದೆ. ನಿಮ್ಮ ಈ ಸಾಧನೆಯು ಕಿರಿಯ ಸಹಪಾಠಿಗಳಿಗೂ ಮಾದರಿಯಾಗಲಿ. ಮುಂದಿನ ನಿಮ್ಮ ಉನ್ನತ ವಿದ್ಯಾಭ್ಯಾಸದಲ್ಲಿ ಕೂಡ ಇದೇ ರೀತಿಯ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ, ಪೋಷಕರಿಗೆ ಒಳ್ಳೆಯ ಹೆಸರು ತರಬೇಕು. ಜೀವನದಲ್ಲಿ ಉತ್ತಮ ಗುರಿ ಅಳವಡಿಸಿಕೊಂಡು ಮುನ್ನಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

*ಐವರು ವಿದ್ಯಾರ್ಥಿಗಳಿಗೆ ಸನ್ಮಾನ*
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮೋಹನ್ ಜೆ.ಎಂ ಅವರು 625 ಕ್ಕೆ 623 ಅಂಕ, ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಐಶ್ವರ್ಯ 625 ಕ್ಕೆ 618 ಅಂಕ ಹಾಗೂ ನಿಶ್ಚಿತ ಆರ್ 625 ಕ್ಕೆ 617 ಅಂಕ ಪಡೆಯುವ ಮೂಲಕ ಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯದ 22 ಟಾಪರ್ಸ್ ಗಳ ಪೈಕಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಾದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ ಭಾವನಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಕ್ರಾಸ್ ನ ಎಸ್.ಜೆ.ಸಿ.ಅರ್ ಪ್ರೌಢಶಾಲೆಯ ರಂಜಿತ ಎ.ಸಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago