ಬೆಂ.ಗ್ರಾ ಜಿಲ್ಲೆಯ ಎಸ್ ಎಸ್ ಎಲ್ ಸಿ ಟಾಪರ್ಸ್ ಗೆ ಸನ್ಮಾನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಐದು ವಿದ್ಯಾರ್ಥಿಗಳನ್ನು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನಿಸಿದರು.

ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಂತರ ಸಿಇಒ ಅವರು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿಯೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ, ಶಿಕ್ಷಕರ ಸಹಕಾರದಿಂದ ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಲು ಸಾಧ್ಯವಾಗಿದೆ. ನಿಮ್ಮ ಈ ಸಾಧನೆಯು ಕಿರಿಯ ಸಹಪಾಠಿಗಳಿಗೂ ಮಾದರಿಯಾಗಲಿ. ಮುಂದಿನ ನಿಮ್ಮ ಉನ್ನತ ವಿದ್ಯಾಭ್ಯಾಸದಲ್ಲಿ ಕೂಡ ಇದೇ ರೀತಿಯ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ, ಪೋಷಕರಿಗೆ ಒಳ್ಳೆಯ ಹೆಸರು ತರಬೇಕು. ಜೀವನದಲ್ಲಿ ಉತ್ತಮ ಗುರಿ ಅಳವಡಿಸಿಕೊಂಡು ಮುನ್ನಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

*ಐವರು ವಿದ್ಯಾರ್ಥಿಗಳಿಗೆ ಸನ್ಮಾನ*
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮೋಹನ್ ಜೆ.ಎಂ ಅವರು 625 ಕ್ಕೆ 623 ಅಂಕ, ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಐಶ್ವರ್ಯ 625 ಕ್ಕೆ 618 ಅಂಕ ಹಾಗೂ ನಿಶ್ಚಿತ ಆರ್ 625 ಕ್ಕೆ 617 ಅಂಕ ಪಡೆಯುವ ಮೂಲಕ ಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯದ 22 ಟಾಪರ್ಸ್ ಗಳ ಪೈಕಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಾದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ ಭಾವನಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಕ್ರಾಸ್ ನ ಎಸ್.ಜೆ.ಸಿ.ಅರ್ ಪ್ರೌಢಶಾಲೆಯ ರಂಜಿತ ಎ.ಸಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

4 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

13 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

14 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago