ಬೆಂ.ಗ್ರಾ ಜಿಲ್ಲೆಯ ಎಸ್ ಎಸ್ ಎಲ್ ಸಿ ಟಾಪರ್ಸ್ ಗೆ ಸನ್ಮಾನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಐದು ವಿದ್ಯಾರ್ಥಿಗಳನ್ನು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನಿಸಿದರು.

ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಂತರ ಸಿಇಒ ಅವರು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿಯೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ, ಶಿಕ್ಷಕರ ಸಹಕಾರದಿಂದ ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಲು ಸಾಧ್ಯವಾಗಿದೆ. ನಿಮ್ಮ ಈ ಸಾಧನೆಯು ಕಿರಿಯ ಸಹಪಾಠಿಗಳಿಗೂ ಮಾದರಿಯಾಗಲಿ. ಮುಂದಿನ ನಿಮ್ಮ ಉನ್ನತ ವಿದ್ಯಾಭ್ಯಾಸದಲ್ಲಿ ಕೂಡ ಇದೇ ರೀತಿಯ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ, ಪೋಷಕರಿಗೆ ಒಳ್ಳೆಯ ಹೆಸರು ತರಬೇಕು. ಜೀವನದಲ್ಲಿ ಉತ್ತಮ ಗುರಿ ಅಳವಡಿಸಿಕೊಂಡು ಮುನ್ನಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

*ಐವರು ವಿದ್ಯಾರ್ಥಿಗಳಿಗೆ ಸನ್ಮಾನ*
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮೋಹನ್ ಜೆ.ಎಂ ಅವರು 625 ಕ್ಕೆ 623 ಅಂಕ, ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಐಶ್ವರ್ಯ 625 ಕ್ಕೆ 618 ಅಂಕ ಹಾಗೂ ನಿಶ್ಚಿತ ಆರ್ 625 ಕ್ಕೆ 617 ಅಂಕ ಪಡೆಯುವ ಮೂಲಕ ಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯದ 22 ಟಾಪರ್ಸ್ ಗಳ ಪೈಕಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಾದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ ಭಾವನಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಕ್ರಾಸ್ ನ ಎಸ್.ಜೆ.ಸಿ.ಅರ್ ಪ್ರೌಢಶಾಲೆಯ ರಂಜಿತ ಎ.ಸಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

30 minutes ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago