ಬೆಂ.ಗ್ರಾ ಜಿಲ್ಲೆಯ ರೈತರ ಕುಂದುಕೊರತೆ ಸಭೆ:

ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಜಿಲ್ಲೆಯ ರೈತರ ಕುಂದುಕೊರತೆಗಳ ಸಭೆ ಆಯೋಜಿಸಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಿ ಅವರ ಅಹವಾಲು ಸ್ವೀಕರಿಸಲಾಯಿತು.

ರೈತರು ಜಮೀನುಗಳ ಫವತಿ ಖಾತೆ, ಪೋಡಿ ದುರಸ್ತಿ, ಪಹಣಿಯಲ್ಲಿ ಹೆಸರು ಬದಲಾವಣೆ ಸಮಸ್ಯೆ, ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನ ಜಾಗದ ಒತ್ತುವರಿ, ಅಕ್ರಮ ಮದ್ಯ ಮಾರಾಟ, ಕೆರೆ, ಸ್ಮಶಾನ, ಸರ್ಕಾರಿ ಜಾಗ ಒತ್ತುವರಿ, ಕಳಪೆ ಕಾಮಗಾರಿ, ಗಣಿಗಾರಿಕೆ, ತ್ಯಾಜ್ಯ ಘಟಕ ಸರಿಪಡಿಸುವಿಕೆ , ಆಸ್ಪತ್ರೆಗಳ ಅವ್ಯವಸ್ಥೆ, ಶಾಶ್ವತ ಕೃಷಿ ವಲಯ, ಕುಡಿಯುವ ನೀರು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ರೈತರು ಜಿಲ್ಲಾಧಿಕಾರಿಗಳ ಗಮನ ಸೆಳೆದರು.

*ಅಕ್ರಮ ಗಣಿಗಾರಿಕೆ ತಡೆಯಿರಿ*

ಜಿಲ್ಲೆಯಾದ್ಯಂತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೊಂದರೆ ಆಗುತ್ತಿದೆ. ಕೊಯಿರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೈಲಗೆರೆಯಲ್ಲಿ ನಿಯಮಗಳನ್ನು ಮೀರಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಸುಮಾರು 350 ಅಡಿ ಆಳ ತೆಗೆದಿದ್ದಾರೆ. ಗಣಿ ಧೂಳಿನಿಂದ ರೇಷ್ಮೆ ಬೆಳೆ ಬೆಳೆಯಲು ಆಗುತ್ತಿಲ್ಲ, ನೆಮ್ಮದಿಯಿಂದ ಮನೆಯಲ್ಲಿ ಮಲಗಲು ಸಾಧ್ಯವಾಗುತ್ತಿಲ್ಲ, ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಮನವಿ ಮಾಡಿದರು.

*ರೈತರಿಗೆ ಸಮರ್ಪಕ ವಿದ್ಯುತ್ ಸಂಪರ್ಕ ಒದಗಿಸಲು ಮನವಿ*

ಕೃಷಿ ಜಮೀನುಗಳಲ್ಲಿ ವಿದ್ಯುತ್ ಪರಿವರ್ತಕ (ಟಿಸಿ) ಕೆಟ್ಟರೆ ಸಂಬಂಧಪಟ್ಟ ವಿದ್ಯುತ್ ಅಧಿಕಾರಿಗಳಿಗೆ ತಿಳಿಸಿದರು ಕೂಡ ವಿದ್ಯುತ್ ಸಂಪರ್ಕ ಕಲ್ಪಿಸಲು ದಿನ ಗಟ್ಟಲೇ ಕಾಯಿಸುತ್ತಾರೆ, ರೈತರ ಪಂಪ್ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗಬೇಕು. ಹಗಲಿನಲ್ಲಿ ಹೆಚ್ಚು ಕರೆಂಟ್ ಕೊಟ್ಟರೇ ಒಳ್ಳೆಯದು ಎಂದು ರೈತರೊಬ್ಬರು ಹೇಳಿದರು.

*ಸಾರಾಯಿ ಅಕ್ರಮ ಮಾರಾಟ ನಿಷೇಧ ಮಾಡಿ*

ಜಿಲ್ಲೆಯಾದ್ಯಂತ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಇದರ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮೀಣ ಕುಟುಂಬಗಳಲ್ಲಿ ಕುಡುಕರಿಂದ ಮಹಿಳೆಯರಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ಸಾರಾಯಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸಾರಾಯಿ ಮಾರಾಟ ನಿಷೇಧಮಾಡಿ ಎಂದು ರೈತರು ಒಕ್ಕೊರಲಿನಿಂದ ಆಗ್ರಹಿಸಿದರು.

*ಫಲಾನುಭವಿಗಳ ಹೆಚ್ಚಳಕ್ಕೆ ಮನವಿ*

ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಮೂಲಕ ಸಿಗುವ ಸರ್ಕಾರಿ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಗುರಿ ನಿರ್ದಿಷ್ಟವಾಗಿರುತ್ತದೆ. ಹಾಗಾಗಿ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಬೇಕು ಎಂದು ರೈತರು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳು ರೈತರ ಅಹವಾಲುಗಳನ್ನು ಆಲಿಸಿದ ನಂತರ ಮಾತನಾಡಿ ಸರ್ಕಾರಿ ಜಾಗ, ಕೆರೆ, ರಾಜಕಾಲುವೆ, ಸ್ಮಶಾನ, ರಸ್ತೆ ಒತ್ತುವರಿಗೆ ಸಂಬಂಧಿಸಿದಂತೆ ದಾಖಲೆ ನೀಡಿದರೆ ಪರಿಶೀಲನೆ ನಡೆಸಿ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಹಿಂದೆ 1.25.000 ಹೆಕ್ಟೇರ್ ಕೃಷಿವಲಯವಿದ್ದು ಈಗ ಸುಮಾರು 65000 ಹೆಕ್ಟೇರ್ ಗೆ ಇಳಿದಿದೆ. ಚನ್ನರಾಯಪಟ್ಟಣ ಕೃಷಿ ವಲಯಕ್ಕೆ ಸಂಬಂಧಿಸಿ ಯಾರು ಆತಂಕ ಪಡುವ ಅಗತ್ಯವಿಲ್ಲ, ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿದ್ದು ಭೂಸ್ವಾದೀನ ಕೈ ಬಿಡಲಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ರಾಗಿ ನೋಂದಣಿಗೆ ಜಿಲ್ಲೆಯಲ್ಲಿ ಇನ್ನು ಸುಮಾರು 2500 ರೈತರು ಬಾಕಿ ಉಳಿದಿದ್ದಾರೆ ಎಂದು ತಿಳಿಸಿದ್ದೀರಿ. ನೋಂದಣಿ ಪುನರಾರಂಭಿಸಲು ರೈತರು ತಿಳಿಸಿದ್ದು ಈಗಾಗಲೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಈ ಕುರಿತು ಚರ್ಚಿಸಲಾಗಿದೆ. ರಾಜ್ಯ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

ಕೃಷಿ ಜಮೀನುಗಳಿಗೆ ಕಾಡು ಪ್ರಾಣಿಗಳ ಹಾವಳಿಯು ಹೆಚ್ಚಾಗಿರುವ ಕುರಿತು ಅರಣ್ಯ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು. ಒಟ್ಟಾರೆಯಾಗಿ ರೈತರು ಸಲ್ಲಿಸಿರುವ ಅಹವಾಲುಗಳಿಗೆ ಸಂಬಂಧಿಸಿದಂತೆ ಕಾನೂನು ವ್ಯಾಪ್ತಿಯಲ್ಲಿ ಬರುವ ಅರ್ಜಿಗಳು ಬಿಟ್ಟು ಉಳಿದ ಅರ್ಜಿಗಳಿಗೆ ಮೂರು ತಿಂಗಳ ಒಳಗಾಗಿ ತ್ವರಿತ ಪರಿಹಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಸಿಇಒ ಡಾ‌.ಕೆ.ಎನ್ ಅನುರಾಧಾ, ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ಚಂದ್ರಕಾಂತ್ ಎಂ.ವಿ, ಎಎಸ್ಪಿ ನಾಗರಾಜ್, ಡಿವೈಎಸ್ಪಿ ಪಾಂಡುರಂಗ, ಜಿಲ್ಲಾ ಮಟ್ಟದ ಅಧಿಕಾರಿಗಳು, ರೈತ ಸಂಘನೆಗಳ ಅಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

9 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

10 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

10 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

12 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

15 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

16 hours ago