ಬೆಂ.ಗ್ರಾ. ಜಿಲ್ಲೆ: ಮೇ 07 ರಂದು ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ, ಮೇ 10 ರಂದು ನಡೆಯಲಿದ್ದು, 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ವಿಶೇಷವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್-SVEEP) ಚಟುವಟಿಕೆಗಳನ್ನು ಮೇ 07 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳನ್ನು ಈಗಾಗಲೇ ಗುರುತಿಸಲಾಗಿದ್ದು ಈ ಮತಗಟ್ಟೆಗಳಲ್ಲಿ ಮೇ 10 ರಂದು ನಡೆಯುವ ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ಮತದಾನದ ಪ್ರಾಮುಖ್ಯತೆ, ಜಾಗೃತಿ ಮತ್ತು ಅರಿವನ್ನು ಮತದಾರರಲ್ಲಿ ಮೂಡಿಸುವುದರಿಂದ ಮತದಾನದ ಪ್ರಮಾಣ ಹೆಚ್ಚಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಮತದಾರರಿಗೂ ಮತದಾರರ ಮಾರ್ಗದರ್ಶಿ ಮತ್ತು ವೋಟರ್ ಇನ್ಫಾರ್ಮೇಶನ್ ಸ್ಲಿಪ್ ಶೇಕಡ ನೂರರಷ್ಟು ವಿತರಣೆ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಗುವುದು ಇಲ್ಲವಾದಲ್ಲಿ ಕೂಡಲೇ ಕ್ರಮ ವಹಿಸಲಾಗುವುದು.

ಪುನೀತ್ ರಾಜ್‌ಕುಮಾರ್ ಹಾಗೂ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರ ಮತದಾರರ ಜಾಗೃತಿ ಮೂಡಿಸುವ ವಿಡಿಯೋಗಳನ್ನು ಪ್ರದರ್ಶಿಸಲಾಗುವುದು.

ಮತಗಟ್ಟೆಗಳಲ್ಲಿ ಮತದಾರರಿಗೆ ಒದಗಿಸುವ ವಿಶೇಷ ಸೌಲಭ್ಯಗಳಾದ ನೆರಳಿನ ವ್ಯವಸ್ಥೆ, ಶಾಮಿಯಾನ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಶೌಚಾಲಯ, ರ್ಯಾಂಪ್ ಅಂಡ್ ರೈಲಿಂಗ್ಸ್, ಗಾಲಿ ಕುರ್ಚಿ, ಅಗತ್ಯವಿರುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಛಾಯಾಚಿತ್ರ ವಿಡಿಯೋ ಚಿತ್ರೀಕರಿಸಿ ಕಡಿಮೆ ಮತದಾನ ದಾಖಲಾದ ಕ್ಷೇತ್ರಗಳಲ್ಲಿ ಮತದಾನದ ದಿನಕ್ಕೆ ಮುಂಚಿತವಾಗಿ ಪ್ರದರ್ಶಿಸಲಾಗುವುದು.

ಮತದಾರರು ಮತದಾನ ಮಾಡುವಂತೆ ಆಕರ್ಷಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ

ತಲಾ 05 ರಂತೆ 20 ಮಹಿಳಾ(ಸಖಿ) ಮತಗಟ್ಟೆಗಳು

ತಲಾ 01 ರಂತೆ 04 ವಿಕಲಚೇತನ ಮತಗಟ್ಟೆಗಳು

ತಲಾ 01 ರಂತೆ 04 ಯುವಕರ ಮತಗಟ್ಟೆಗಳು

ತಲಾ 01 ರಂತೆ 04 ಎತ್ನಿಕ್ ಮತಗಟ್ಟೆಗಳು

ತಲಾ 01 ರಂತೆ 04 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

4 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

5 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago