ಬೆಂ.ಗ್ರಾ. ಜಿಲ್ಲೆ: ಮೇ 07 ರಂದು ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ, ಮೇ 10 ರಂದು ನಡೆಯಲಿದ್ದು, 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ವಿಶೇಷವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್-SVEEP) ಚಟುವಟಿಕೆಗಳನ್ನು ಮೇ 07 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳನ್ನು ಈಗಾಗಲೇ ಗುರುತಿಸಲಾಗಿದ್ದು ಈ ಮತಗಟ್ಟೆಗಳಲ್ಲಿ ಮೇ 10 ರಂದು ನಡೆಯುವ ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ಮತದಾನದ ಪ್ರಾಮುಖ್ಯತೆ, ಜಾಗೃತಿ ಮತ್ತು ಅರಿವನ್ನು ಮತದಾರರಲ್ಲಿ ಮೂಡಿಸುವುದರಿಂದ ಮತದಾನದ ಪ್ರಮಾಣ ಹೆಚ್ಚಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಮತದಾರರಿಗೂ ಮತದಾರರ ಮಾರ್ಗದರ್ಶಿ ಮತ್ತು ವೋಟರ್ ಇನ್ಫಾರ್ಮೇಶನ್ ಸ್ಲಿಪ್ ಶೇಕಡ ನೂರರಷ್ಟು ವಿತರಣೆ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಗುವುದು ಇಲ್ಲವಾದಲ್ಲಿ ಕೂಡಲೇ ಕ್ರಮ ವಹಿಸಲಾಗುವುದು.

ಪುನೀತ್ ರಾಜ್‌ಕುಮಾರ್ ಹಾಗೂ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರ ಮತದಾರರ ಜಾಗೃತಿ ಮೂಡಿಸುವ ವಿಡಿಯೋಗಳನ್ನು ಪ್ರದರ್ಶಿಸಲಾಗುವುದು.

ಮತಗಟ್ಟೆಗಳಲ್ಲಿ ಮತದಾರರಿಗೆ ಒದಗಿಸುವ ವಿಶೇಷ ಸೌಲಭ್ಯಗಳಾದ ನೆರಳಿನ ವ್ಯವಸ್ಥೆ, ಶಾಮಿಯಾನ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಶೌಚಾಲಯ, ರ್ಯಾಂಪ್ ಅಂಡ್ ರೈಲಿಂಗ್ಸ್, ಗಾಲಿ ಕುರ್ಚಿ, ಅಗತ್ಯವಿರುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಛಾಯಾಚಿತ್ರ ವಿಡಿಯೋ ಚಿತ್ರೀಕರಿಸಿ ಕಡಿಮೆ ಮತದಾನ ದಾಖಲಾದ ಕ್ಷೇತ್ರಗಳಲ್ಲಿ ಮತದಾನದ ದಿನಕ್ಕೆ ಮುಂಚಿತವಾಗಿ ಪ್ರದರ್ಶಿಸಲಾಗುವುದು.

ಮತದಾರರು ಮತದಾನ ಮಾಡುವಂತೆ ಆಕರ್ಷಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ

ತಲಾ 05 ರಂತೆ 20 ಮಹಿಳಾ(ಸಖಿ) ಮತಗಟ್ಟೆಗಳು

ತಲಾ 01 ರಂತೆ 04 ವಿಕಲಚೇತನ ಮತಗಟ್ಟೆಗಳು

ತಲಾ 01 ರಂತೆ 04 ಯುವಕರ ಮತಗಟ್ಟೆಗಳು

ತಲಾ 01 ರಂತೆ 04 ಎತ್ನಿಕ್ ಮತಗಟ್ಟೆಗಳು

ತಲಾ 01 ರಂತೆ 04 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

4 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago