ಬೆಂ.ಗ್ರಾ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 9 ವರ್ಷಗಳಿಂದ ವಾರ್ತಾ ಸಹಾಯಕಿಯಾಗಿ ಹಾಗೂ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾವತಿ.ಜೆ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಮನಗರ ಜಿಲ್ಲೆಯ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ವರ್ಗಾವಣೆಯಾಗಿದ್ದಾರೆ.
ಬೆಂ.ಗ್ರಾ ಜಿಲ್ಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ರಾಮನಗರಕ್ಕೆ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದು ಪತ್ರಕರ್ತರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಂಪರ್ಕ ಸೇತುವೆಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಸಹಾಯಕ ಹಾಗೂ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ಕಳೆದ 9 ವರ್ಷಗಳಿಂದ ಕಾರ್ಯನಿರ್ವಸಿರುತ್ತೇನೆ. ಸರ್ಕಾರದ ಪ್ರತಿಯೊಂದು ಯೋಜನೆ, ಸವಲತ್ತುಗಳನ್ನು ಸುದ್ದಿಗಳ ರೂಪದಲ್ಲಿ ಪತ್ರಕರ್ತರ ಮೂಲಕ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪತ್ರಕರ್ತರು ಇಲಾಖೆಗೆ ತುಂಬಾ ಸಹಕಾರ ನೀಡಿದ್ದಾರೆ. ಕಳೆದ 9 ವರ್ಷಗಳ ಅವಧಿಯಲ್ಲಿದ್ದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನನ್ನ ಎಲ್ಲಾ ಅಧಿಕಾರಿಗಳು ನನಗೆ ತುಂಬಾ ಸಹಕಾರ ನೀಡಿದ್ದಾರೆ. ಅವರಿಗೆಲ್ಲಾ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಹೇಮಾವತಿ.ಜೆ ಅವರು ಭಾವುಕ ನುಡಿಗಳನ್ನಾಡಿದ್ದಾರೆ….
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…