ಬೆಂ.ಗ್ರಾ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 9 ವರ್ಷಗಳಿಂದ ವಾರ್ತಾ ಸಹಾಯಕಿಯಾಗಿ ಹಾಗೂ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾವತಿ.ಜೆ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಮನಗರ ಜಿಲ್ಲೆಯ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ವರ್ಗಾವಣೆಯಾಗಿದ್ದಾರೆ.
ಬೆಂ.ಗ್ರಾ ಜಿಲ್ಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ರಾಮನಗರಕ್ಕೆ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದು ಪತ್ರಕರ್ತರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಂಪರ್ಕ ಸೇತುವೆಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಸಹಾಯಕ ಹಾಗೂ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ಕಳೆದ 9 ವರ್ಷಗಳಿಂದ ಕಾರ್ಯನಿರ್ವಸಿರುತ್ತೇನೆ. ಸರ್ಕಾರದ ಪ್ರತಿಯೊಂದು ಯೋಜನೆ, ಸವಲತ್ತುಗಳನ್ನು ಸುದ್ದಿಗಳ ರೂಪದಲ್ಲಿ ಪತ್ರಕರ್ತರ ಮೂಲಕ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪತ್ರಕರ್ತರು ಇಲಾಖೆಗೆ ತುಂಬಾ ಸಹಕಾರ ನೀಡಿದ್ದಾರೆ. ಕಳೆದ 9 ವರ್ಷಗಳ ಅವಧಿಯಲ್ಲಿದ್ದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನನ್ನ ಎಲ್ಲಾ ಅಧಿಕಾರಿಗಳು ನನಗೆ ತುಂಬಾ ಸಹಕಾರ ನೀಡಿದ್ದಾರೆ. ಅವರಿಗೆಲ್ಲಾ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಹೇಮಾವತಿ.ಜೆ ಅವರು ಭಾವುಕ ನುಡಿಗಳನ್ನಾಡಿದ್ದಾರೆ….
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…