Categories: ಲೇಖನ

ಬೆಟ್ಟವನ್ನು ಏರಬೇಕಾಗಿದೆ……ಬೆಟ್ಟದ ತುದಿ ತಲುಪುವವರೆಗೂ……

ಬಹುದೊಡ್ಡ ಬೆಟ್ಟವೊಂದನ್ನು,

ಬಹುದೂರದ ಅತ್ಯಂತ ಎತ್ತರದ ಬೆಟ್ಟವನ್ನು,
ಕಲ್ಲು ಮುಳ್ಳುನ ಹಾದಿಯ ಬೆಟ್ಟವನ್ನು,….

ಬುದ್ದ ಯೇಸು ಪೈಗಂಬರ್ ಬಸವ ಗಾಂಧಿ ಅಂಬೇಡ್ಕರ್ ಗುರುನಾನಕ್ ವಿವೇಕಾನಂದ ಮುಂತಾದ ಘಟಾನುಘಟಿಗಳು ಅರ್ಧ ದಾರಿಯಲ್ಲೇ ನಿಲ್ಲಿಸಿದ ಬೆಟ್ಟವನ್ನು ಏರಬೇಕಾಗಿದೆ….

ಖುರಾನ್ ಬೈಬಲ್ ವೇದ ಉಪನಿಷತ್ತುಗಳು ಮಾರ್ಗ ತೋರುವಲ್ಲಿ, ಪರಿಣಾಮ ಬೀರುವಲ್ಲಿ, ಫಲಿತಾಂಶ ನೀಡುವಲ್ಲಿ ವಿಫಲವಾದ ಬೆಟ್ಟವನ್ನು……

ಅದಕ್ಕಾಗಿ….

ಜನರ ಮನಸ್ಸುಗಳ ಒಳಗೆ ಇಳಿಯಬೇಕಿದೆ….

ಅವರ ಹೃದಯದ ಬಾಗಿಲನ್ನು ತಟ್ಟಬೇಕಿದೆ…

ಅವರ ಪ್ರತಿರೋಧವನ್ನು ಎದುರಿಸಬೇಕಿದೆ….

ಅವರ ನಿಂದನೆಯನ್ನು ಸಹಿಸಬೇಕಿದೆ…..

ಅವರ ಆರೋಪಗಳನ್ನು ಕೇಳಿಸಿಕೊಳ್ಳಬೇಕಿದೆ….

ಅವರ ಅಜ್ಞಾನಕ್ಕೆ ಮರುಕಪಡಬೇಕಾಗಿದೆ….

ಅವರ ಉಡಾಫೆತನವನ್ನು ನಿರ್ಲಕ್ಷಿಸಬೇಕಾಗಿದೆ…..

ಅವರ ಮೌಢ್ಯವನ್ನು ಅರ್ಥಮಾಡಿಸಬೇಕಿದೆ…

ಅವರ ನಂಬಿಕೆಯನ್ನು ಪ್ರಶ್ನಿಸಬೇಕಿದೆ….

ಅವರು ನೀಡುವ ನೋವನ್ನು ನುಂಗಬೇಕಿದೆ…

ಅವರಿಗೆ ಪ್ರೀತಿಯನ್ನು ಹಂಚಬೇಕಿದೆ…….

ಅದಕ್ಕಾಗಿ…….

ವಿಶ್ರಾಂತಿ ಪಡೆಯುವಂತಿಲ್ಲ,…

ಸುಖ ಬಯಸುವಂತಿಲ್ಲ…

ತಾಳ್ಮೆಗೆಡುವಂತಿಲ್ಲ…..

ಪ್ರಶಸ್ತಿ ಸ್ವೀಕರಿಸುವಂತಿಲ್ಲ…

ಸನ್ಮಾನಕ್ಕೆ ಹಾತೊರೆಯುವಂತಿಲ್ಲ…

ಅಧಿಕಾರಕ್ಕಾಗಿ ಹೊಡೆದಾಡುವಂತಿಲ್ಲ…..

ಪ್ರಚಾರಕ್ಕೆ ಹಲ್ಲುಗಿಂಜುವಂತಿಲ್ಲ…..

ಆ ಮಾರ್ಗದಲ್ಲಿ……..

ಬ್ರಾಹ್ಮಣರನ್ನು ಟೀಕಿಸಬೇಕಾಗುತ್ತದೆ…..

ದಲಿತರನ್ನೂ ಪ್ರಶ್ನಿಸಬೇಕಾಗುತ್ತದೆ……

ಒಕ್ಕಲಿಗರನ್ನು ನಿಂದಿಸಬೇಕಾಗುತ್ತದೆ…

ಲಿಂಗಾಯಿತರನ್ನು ಎಚ್ಚರಿಸಬೇಕಾಗುತ್ತದೆ…..

ಕುರುಬರನ್ನು ಕುಟುಕಬೇಕಾಗುತ್ತದೆ….

ಎಲ್ಲಾ ಜಾತಿಗಳವರನ್ನು ಹೀಗಳೆಯಬೇಕಾಗುತ್ತದೆ….

ಮಹಿಳೆಯರಿಗೂ ಬುದ್ದಿ ಹೇಳಬೇಕಾಗುತ್ತದೆ….

ಪುರುಷರಿಗೆ ಗದರಿಸಬೇಕಾಗುತ್ತದೆ…..

ಮಕ್ಕಳಿಗೆ ಕಲಿಸಬೇಕಾಗುತ್ತದೆ…..

ರೈತರನ್ನು ದಡ್ಡರೆನ್ನಬೇಕಾಗುತ್ತದೆ….

ಕಾರ್ಮಿಕರನ್ನು ಜಗಳಗಂಟರು ಎಂದು ದೂರಬೇಕಾಗುತ್ತದೆ….

ಧಾರ್ಮಿಕ ನಾಯಕರ ಮುಖವಾಡ ಕಳಚಬೇಕಾಗುತ್ತದೆ….

ಸಿನಿಮಾ ನಟನಟಿಯರ ಬಣ್ಣ ಬಯಲುಮಾಡಬೇಕಾಗುತ್ತದೆ…

ದೇವರ ಅಸ್ತಿತ್ವವನ್ನೂ ಕೇಳಬೇಕಾಗುತ್ತದೆ…..

ರಾಜಕಾರಣಿಗಳ ಭ್ರಷ್ಟತೆ ಎತ್ತಿ ತೋರಿಸಬೇಕಾಗುತ್ತದೆ….

ಅಧಿಕಾರಿಗಳ ಹಣದ ಮೋಹ ಖಂಡಿಸಬೇಕಾಗುತ್ತದೆ….

ಸಮಾಜ ಸೇವಕರ ಗೋಮುಖ ವ್ಯಾಘ್ರತನ ವರ್ಣಿಸಬೇಕಾಗುತ್ತದೆ…

ಮತದಾರರ ಸ್ವಾರ್ಥ ಹೇಳಲೇಬೇಕಾಗುತ್ತದೆ…

ಇದರ ನಡುವೆ………..

ಎಡಬಿಡಂಗಿ ಎನ್ನುವರು,
ದೇಶದ್ರೋಹಿ ಎನ್ನುವರು,
ಧರ್ಮ ವಿರೋಧಿ ಎನ್ನುವರು,
ಮುಭಕ್ತನೆನ್ನುವರು,
ಗಂಜಿಗಿರಾಕಿ ಎನ್ನುವರು,
ತಟ್ಟೆ ಕಾಸಿನ ಭಿಕ್ಷುಕ ಎನ್ನುವರು,
ಹಿಜಡಾ ಎನ್ನುವರು,
ಎಡಪಂಥೀಯ ಎನ್ನುವರು,
ಬಲಪಂಥೀಯ ಎನ್ನುವರು,
ತೆವಲು ಬರಹಗಾರ ಎನ್ನುವರು,
ಪಲಾಯನವಾದಿ ಎನ್ನುವರು,
ಪ್ರಚೋದಿಸುವರು,
ಹುಚ್ಚನೆನ್ನುವರು,
ವೈಯಕ್ತಿಕವಾಗಿ ನಿಂದಿಸುವರು…….

ಆಗಲೂ…..

ತುಂಬು ಹೃದಯದಿಂದ ಸ್ವಾಗತಿಸುವವರು,
ಪ್ರೋತ್ಸಾಹಿಸುವವರು,
ಬೆನ್ನು ತಟ್ಟುವವರು,
ಜೊತೆಯಲ್ಲಿ ಬರುವವರು ಇದ್ದೇ ಇರುತ್ತಾರೆ…..

ನಿರ್ಲಿಪ್ತರು,
ನಿರ್ಲಕ್ಷಿಸುವವರು,
ಗಮನಿಸುವವರು,
ಕುತೂಹಲಿಗಳು,
ಎಚ್ಚರಿಸುವವರು,
ಉದಾಸೀನ ಮಾಡುವವರು,
ಇರುತ್ತಾರೆ…..

ಜೊತೆಗೆ
ಬೆಟ್ಟವನ್ನು ಹತ್ತಲು ಬಿಡದೆ….

ಕಾಲೆಳೆಯುವವರು,
ಕಲ್ಲು ಎಸೆಯುವವರು,
ಬಾಣ ಬಿಡುವವರು,
ಹಿತಶತ್ರುಗಳು,
ಮಜಾ ನೋಡುವವರು,
ನಾಶ ಮಾಡಲು ಯತ್ನಿಸುವವರು,
ಕೊಂದೇ ಬಿಡುವವರು,
ಇರುತ್ತಾರೆ…….

ಏಕೆಂದರೆ….

ಅದು ಅಂತಿಂಥ ಬೆಟ್ಟವಲ್ಲ…

ಮಾನವೀಯತೆಯ ಬೆಟ್ಟ,
ಜೀವಪರ ಬೆಟ್ಟ,
ಮಾನವ ಧರ್ಮದ ಬೆಟ್ಟ,
ಪ್ರಕೃತಿ ಸಹಜ‌ ಸೃಷ್ಟಿಯ ಬೆಟ್ಟ,

ಅಲ್ಲಿಗೆ ತಲುಪಿದ್ದೇ ಆದರೆ,……

ಈ ಪಟ್ಟಭದ್ರ ಹಿತಾಸಕ್ತಿಗಳ ಮಾನವ ನಿರ್ಮಿತ ಚಿಕ್ಕ ಚಿಕ್ಕ ಬೆಟ್ಟಗಳು ಕುಸಿಯುತ್ತವೆ,
ಕೃತಕ ಗೋಡೆಗಳು ಉದುರಿ ಬೀಳುತ್ತವೆ.
ಅಸ್ತಿತ್ವವೇ ಇಲ್ಲವಾಗುತ್ತದೆ.

ಆದರೂ……

ಹತ್ತಲೇ ಬೇಕಿದೆ ಆ ಬೆಟ್ಟವನ್ನು,
ಆ ಕನಸಿನಾ ಬೆಟ್ಟವನ್ನು,
ಬನ್ನಿ ನನ್ನೊಂದಿಗೆ…..
ನಾನು ನಿಮ್ಮೊಂದಿಗೆ…..
ಪ್ರಯತ್ನಿಸುತ್ತಲೇ ಇರೋಣ….
ನಿರಂತರವಾಗಿ….
ಬೆಟ್ಟದ ತುದಿ ತಲುಪುವವರೆಗೂ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

4 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

5 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

13 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago