Categories: ಲೇಖನ

ಬೆಟ್ಟವನ್ನು ಏರಬೇಕಾಗಿದೆ……ಬೆಟ್ಟದ ತುದಿ ತಲುಪುವವರೆಗೂ……

ಬಹುದೊಡ್ಡ ಬೆಟ್ಟವೊಂದನ್ನು,

ಬಹುದೂರದ ಅತ್ಯಂತ ಎತ್ತರದ ಬೆಟ್ಟವನ್ನು,
ಕಲ್ಲು ಮುಳ್ಳುನ ಹಾದಿಯ ಬೆಟ್ಟವನ್ನು,….

ಬುದ್ದ ಯೇಸು ಪೈಗಂಬರ್ ಬಸವ ಗಾಂಧಿ ಅಂಬೇಡ್ಕರ್ ಗುರುನಾನಕ್ ವಿವೇಕಾನಂದ ಮುಂತಾದ ಘಟಾನುಘಟಿಗಳು ಅರ್ಧ ದಾರಿಯಲ್ಲೇ ನಿಲ್ಲಿಸಿದ ಬೆಟ್ಟವನ್ನು ಏರಬೇಕಾಗಿದೆ….

ಖುರಾನ್ ಬೈಬಲ್ ವೇದ ಉಪನಿಷತ್ತುಗಳು ಮಾರ್ಗ ತೋರುವಲ್ಲಿ, ಪರಿಣಾಮ ಬೀರುವಲ್ಲಿ, ಫಲಿತಾಂಶ ನೀಡುವಲ್ಲಿ ವಿಫಲವಾದ ಬೆಟ್ಟವನ್ನು……

ಅದಕ್ಕಾಗಿ….

ಜನರ ಮನಸ್ಸುಗಳ ಒಳಗೆ ಇಳಿಯಬೇಕಿದೆ….

ಅವರ ಹೃದಯದ ಬಾಗಿಲನ್ನು ತಟ್ಟಬೇಕಿದೆ…

ಅವರ ಪ್ರತಿರೋಧವನ್ನು ಎದುರಿಸಬೇಕಿದೆ….

ಅವರ ನಿಂದನೆಯನ್ನು ಸಹಿಸಬೇಕಿದೆ…..

ಅವರ ಆರೋಪಗಳನ್ನು ಕೇಳಿಸಿಕೊಳ್ಳಬೇಕಿದೆ….

ಅವರ ಅಜ್ಞಾನಕ್ಕೆ ಮರುಕಪಡಬೇಕಾಗಿದೆ….

ಅವರ ಉಡಾಫೆತನವನ್ನು ನಿರ್ಲಕ್ಷಿಸಬೇಕಾಗಿದೆ…..

ಅವರ ಮೌಢ್ಯವನ್ನು ಅರ್ಥಮಾಡಿಸಬೇಕಿದೆ…

ಅವರ ನಂಬಿಕೆಯನ್ನು ಪ್ರಶ್ನಿಸಬೇಕಿದೆ….

ಅವರು ನೀಡುವ ನೋವನ್ನು ನುಂಗಬೇಕಿದೆ…

ಅವರಿಗೆ ಪ್ರೀತಿಯನ್ನು ಹಂಚಬೇಕಿದೆ…….

ಅದಕ್ಕಾಗಿ…….

ವಿಶ್ರಾಂತಿ ಪಡೆಯುವಂತಿಲ್ಲ,…

ಸುಖ ಬಯಸುವಂತಿಲ್ಲ…

ತಾಳ್ಮೆಗೆಡುವಂತಿಲ್ಲ…..

ಪ್ರಶಸ್ತಿ ಸ್ವೀಕರಿಸುವಂತಿಲ್ಲ…

ಸನ್ಮಾನಕ್ಕೆ ಹಾತೊರೆಯುವಂತಿಲ್ಲ…

ಅಧಿಕಾರಕ್ಕಾಗಿ ಹೊಡೆದಾಡುವಂತಿಲ್ಲ…..

ಪ್ರಚಾರಕ್ಕೆ ಹಲ್ಲುಗಿಂಜುವಂತಿಲ್ಲ…..

ಆ ಮಾರ್ಗದಲ್ಲಿ……..

ಬ್ರಾಹ್ಮಣರನ್ನು ಟೀಕಿಸಬೇಕಾಗುತ್ತದೆ…..

ದಲಿತರನ್ನೂ ಪ್ರಶ್ನಿಸಬೇಕಾಗುತ್ತದೆ……

ಒಕ್ಕಲಿಗರನ್ನು ನಿಂದಿಸಬೇಕಾಗುತ್ತದೆ…

ಲಿಂಗಾಯಿತರನ್ನು ಎಚ್ಚರಿಸಬೇಕಾಗುತ್ತದೆ…..

ಕುರುಬರನ್ನು ಕುಟುಕಬೇಕಾಗುತ್ತದೆ….

ಎಲ್ಲಾ ಜಾತಿಗಳವರನ್ನು ಹೀಗಳೆಯಬೇಕಾಗುತ್ತದೆ….

ಮಹಿಳೆಯರಿಗೂ ಬುದ್ದಿ ಹೇಳಬೇಕಾಗುತ್ತದೆ….

ಪುರುಷರಿಗೆ ಗದರಿಸಬೇಕಾಗುತ್ತದೆ…..

ಮಕ್ಕಳಿಗೆ ಕಲಿಸಬೇಕಾಗುತ್ತದೆ…..

ರೈತರನ್ನು ದಡ್ಡರೆನ್ನಬೇಕಾಗುತ್ತದೆ….

ಕಾರ್ಮಿಕರನ್ನು ಜಗಳಗಂಟರು ಎಂದು ದೂರಬೇಕಾಗುತ್ತದೆ….

ಧಾರ್ಮಿಕ ನಾಯಕರ ಮುಖವಾಡ ಕಳಚಬೇಕಾಗುತ್ತದೆ….

ಸಿನಿಮಾ ನಟನಟಿಯರ ಬಣ್ಣ ಬಯಲುಮಾಡಬೇಕಾಗುತ್ತದೆ…

ದೇವರ ಅಸ್ತಿತ್ವವನ್ನೂ ಕೇಳಬೇಕಾಗುತ್ತದೆ…..

ರಾಜಕಾರಣಿಗಳ ಭ್ರಷ್ಟತೆ ಎತ್ತಿ ತೋರಿಸಬೇಕಾಗುತ್ತದೆ….

ಅಧಿಕಾರಿಗಳ ಹಣದ ಮೋಹ ಖಂಡಿಸಬೇಕಾಗುತ್ತದೆ….

ಸಮಾಜ ಸೇವಕರ ಗೋಮುಖ ವ್ಯಾಘ್ರತನ ವರ್ಣಿಸಬೇಕಾಗುತ್ತದೆ…

ಮತದಾರರ ಸ್ವಾರ್ಥ ಹೇಳಲೇಬೇಕಾಗುತ್ತದೆ…

ಇದರ ನಡುವೆ………..

ಎಡಬಿಡಂಗಿ ಎನ್ನುವರು,
ದೇಶದ್ರೋಹಿ ಎನ್ನುವರು,
ಧರ್ಮ ವಿರೋಧಿ ಎನ್ನುವರು,
ಮುಭಕ್ತನೆನ್ನುವರು,
ಗಂಜಿಗಿರಾಕಿ ಎನ್ನುವರು,
ತಟ್ಟೆ ಕಾಸಿನ ಭಿಕ್ಷುಕ ಎನ್ನುವರು,
ಹಿಜಡಾ ಎನ್ನುವರು,
ಎಡಪಂಥೀಯ ಎನ್ನುವರು,
ಬಲಪಂಥೀಯ ಎನ್ನುವರು,
ತೆವಲು ಬರಹಗಾರ ಎನ್ನುವರು,
ಪಲಾಯನವಾದಿ ಎನ್ನುವರು,
ಪ್ರಚೋದಿಸುವರು,
ಹುಚ್ಚನೆನ್ನುವರು,
ವೈಯಕ್ತಿಕವಾಗಿ ನಿಂದಿಸುವರು…….

ಆಗಲೂ…..

ತುಂಬು ಹೃದಯದಿಂದ ಸ್ವಾಗತಿಸುವವರು,
ಪ್ರೋತ್ಸಾಹಿಸುವವರು,
ಬೆನ್ನು ತಟ್ಟುವವರು,
ಜೊತೆಯಲ್ಲಿ ಬರುವವರು ಇದ್ದೇ ಇರುತ್ತಾರೆ…..

ನಿರ್ಲಿಪ್ತರು,
ನಿರ್ಲಕ್ಷಿಸುವವರು,
ಗಮನಿಸುವವರು,
ಕುತೂಹಲಿಗಳು,
ಎಚ್ಚರಿಸುವವರು,
ಉದಾಸೀನ ಮಾಡುವವರು,
ಇರುತ್ತಾರೆ…..

ಜೊತೆಗೆ
ಬೆಟ್ಟವನ್ನು ಹತ್ತಲು ಬಿಡದೆ….

ಕಾಲೆಳೆಯುವವರು,
ಕಲ್ಲು ಎಸೆಯುವವರು,
ಬಾಣ ಬಿಡುವವರು,
ಹಿತಶತ್ರುಗಳು,
ಮಜಾ ನೋಡುವವರು,
ನಾಶ ಮಾಡಲು ಯತ್ನಿಸುವವರು,
ಕೊಂದೇ ಬಿಡುವವರು,
ಇರುತ್ತಾರೆ…….

ಏಕೆಂದರೆ….

ಅದು ಅಂತಿಂಥ ಬೆಟ್ಟವಲ್ಲ…

ಮಾನವೀಯತೆಯ ಬೆಟ್ಟ,
ಜೀವಪರ ಬೆಟ್ಟ,
ಮಾನವ ಧರ್ಮದ ಬೆಟ್ಟ,
ಪ್ರಕೃತಿ ಸಹಜ‌ ಸೃಷ್ಟಿಯ ಬೆಟ್ಟ,

ಅಲ್ಲಿಗೆ ತಲುಪಿದ್ದೇ ಆದರೆ,……

ಈ ಪಟ್ಟಭದ್ರ ಹಿತಾಸಕ್ತಿಗಳ ಮಾನವ ನಿರ್ಮಿತ ಚಿಕ್ಕ ಚಿಕ್ಕ ಬೆಟ್ಟಗಳು ಕುಸಿಯುತ್ತವೆ,
ಕೃತಕ ಗೋಡೆಗಳು ಉದುರಿ ಬೀಳುತ್ತವೆ.
ಅಸ್ತಿತ್ವವೇ ಇಲ್ಲವಾಗುತ್ತದೆ.

ಆದರೂ……

ಹತ್ತಲೇ ಬೇಕಿದೆ ಆ ಬೆಟ್ಟವನ್ನು,
ಆ ಕನಸಿನಾ ಬೆಟ್ಟವನ್ನು,
ಬನ್ನಿ ನನ್ನೊಂದಿಗೆ…..
ನಾನು ನಿಮ್ಮೊಂದಿಗೆ…..
ಪ್ರಯತ್ನಿಸುತ್ತಲೇ ಇರೋಣ….
ನಿರಂತರವಾಗಿ….
ಬೆಟ್ಟದ ತುದಿ ತಲುಪುವವರೆಗೂ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

34 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago