Categories: ಲೇಖನ

ಬೆಟ್ಟವನ್ನು ಏರಬೇಕಾಗಿದೆ……ಬೆಟ್ಟದ ತುದಿ ತಲುಪುವವರೆಗೂ……

ಬಹುದೊಡ್ಡ ಬೆಟ್ಟವೊಂದನ್ನು,

ಬಹುದೂರದ ಅತ್ಯಂತ ಎತ್ತರದ ಬೆಟ್ಟವನ್ನು,
ಕಲ್ಲು ಮುಳ್ಳುನ ಹಾದಿಯ ಬೆಟ್ಟವನ್ನು,….

ಬುದ್ದ ಯೇಸು ಪೈಗಂಬರ್ ಬಸವ ಗಾಂಧಿ ಅಂಬೇಡ್ಕರ್ ಗುರುನಾನಕ್ ವಿವೇಕಾನಂದ ಮುಂತಾದ ಘಟಾನುಘಟಿಗಳು ಅರ್ಧ ದಾರಿಯಲ್ಲೇ ನಿಲ್ಲಿಸಿದ ಬೆಟ್ಟವನ್ನು ಏರಬೇಕಾಗಿದೆ….

ಖುರಾನ್ ಬೈಬಲ್ ವೇದ ಉಪನಿಷತ್ತುಗಳು ಮಾರ್ಗ ತೋರುವಲ್ಲಿ, ಪರಿಣಾಮ ಬೀರುವಲ್ಲಿ, ಫಲಿತಾಂಶ ನೀಡುವಲ್ಲಿ ವಿಫಲವಾದ ಬೆಟ್ಟವನ್ನು……

ಅದಕ್ಕಾಗಿ….

ಜನರ ಮನಸ್ಸುಗಳ ಒಳಗೆ ಇಳಿಯಬೇಕಿದೆ….

ಅವರ ಹೃದಯದ ಬಾಗಿಲನ್ನು ತಟ್ಟಬೇಕಿದೆ…

ಅವರ ಪ್ರತಿರೋಧವನ್ನು ಎದುರಿಸಬೇಕಿದೆ….

ಅವರ ನಿಂದನೆಯನ್ನು ಸಹಿಸಬೇಕಿದೆ…..

ಅವರ ಆರೋಪಗಳನ್ನು ಕೇಳಿಸಿಕೊಳ್ಳಬೇಕಿದೆ….

ಅವರ ಅಜ್ಞಾನಕ್ಕೆ ಮರುಕಪಡಬೇಕಾಗಿದೆ….

ಅವರ ಉಡಾಫೆತನವನ್ನು ನಿರ್ಲಕ್ಷಿಸಬೇಕಾಗಿದೆ…..

ಅವರ ಮೌಢ್ಯವನ್ನು ಅರ್ಥಮಾಡಿಸಬೇಕಿದೆ…

ಅವರ ನಂಬಿಕೆಯನ್ನು ಪ್ರಶ್ನಿಸಬೇಕಿದೆ….

ಅವರು ನೀಡುವ ನೋವನ್ನು ನುಂಗಬೇಕಿದೆ…

ಅವರಿಗೆ ಪ್ರೀತಿಯನ್ನು ಹಂಚಬೇಕಿದೆ…….

ಅದಕ್ಕಾಗಿ…….

ವಿಶ್ರಾಂತಿ ಪಡೆಯುವಂತಿಲ್ಲ,…

ಸುಖ ಬಯಸುವಂತಿಲ್ಲ…

ತಾಳ್ಮೆಗೆಡುವಂತಿಲ್ಲ…..

ಪ್ರಶಸ್ತಿ ಸ್ವೀಕರಿಸುವಂತಿಲ್ಲ…

ಸನ್ಮಾನಕ್ಕೆ ಹಾತೊರೆಯುವಂತಿಲ್ಲ…

ಅಧಿಕಾರಕ್ಕಾಗಿ ಹೊಡೆದಾಡುವಂತಿಲ್ಲ…..

ಪ್ರಚಾರಕ್ಕೆ ಹಲ್ಲುಗಿಂಜುವಂತಿಲ್ಲ…..

ಆ ಮಾರ್ಗದಲ್ಲಿ……..

ಬ್ರಾಹ್ಮಣರನ್ನು ಟೀಕಿಸಬೇಕಾಗುತ್ತದೆ…..

ದಲಿತರನ್ನೂ ಪ್ರಶ್ನಿಸಬೇಕಾಗುತ್ತದೆ……

ಒಕ್ಕಲಿಗರನ್ನು ನಿಂದಿಸಬೇಕಾಗುತ್ತದೆ…

ಲಿಂಗಾಯಿತರನ್ನು ಎಚ್ಚರಿಸಬೇಕಾಗುತ್ತದೆ…..

ಕುರುಬರನ್ನು ಕುಟುಕಬೇಕಾಗುತ್ತದೆ….

ಎಲ್ಲಾ ಜಾತಿಗಳವರನ್ನು ಹೀಗಳೆಯಬೇಕಾಗುತ್ತದೆ….

ಮಹಿಳೆಯರಿಗೂ ಬುದ್ದಿ ಹೇಳಬೇಕಾಗುತ್ತದೆ….

ಪುರುಷರಿಗೆ ಗದರಿಸಬೇಕಾಗುತ್ತದೆ…..

ಮಕ್ಕಳಿಗೆ ಕಲಿಸಬೇಕಾಗುತ್ತದೆ…..

ರೈತರನ್ನು ದಡ್ಡರೆನ್ನಬೇಕಾಗುತ್ತದೆ….

ಕಾರ್ಮಿಕರನ್ನು ಜಗಳಗಂಟರು ಎಂದು ದೂರಬೇಕಾಗುತ್ತದೆ….

ಧಾರ್ಮಿಕ ನಾಯಕರ ಮುಖವಾಡ ಕಳಚಬೇಕಾಗುತ್ತದೆ….

ಸಿನಿಮಾ ನಟನಟಿಯರ ಬಣ್ಣ ಬಯಲುಮಾಡಬೇಕಾಗುತ್ತದೆ…

ದೇವರ ಅಸ್ತಿತ್ವವನ್ನೂ ಕೇಳಬೇಕಾಗುತ್ತದೆ…..

ರಾಜಕಾರಣಿಗಳ ಭ್ರಷ್ಟತೆ ಎತ್ತಿ ತೋರಿಸಬೇಕಾಗುತ್ತದೆ….

ಅಧಿಕಾರಿಗಳ ಹಣದ ಮೋಹ ಖಂಡಿಸಬೇಕಾಗುತ್ತದೆ….

ಸಮಾಜ ಸೇವಕರ ಗೋಮುಖ ವ್ಯಾಘ್ರತನ ವರ್ಣಿಸಬೇಕಾಗುತ್ತದೆ…

ಮತದಾರರ ಸ್ವಾರ್ಥ ಹೇಳಲೇಬೇಕಾಗುತ್ತದೆ…

ಇದರ ನಡುವೆ………..

ಎಡಬಿಡಂಗಿ ಎನ್ನುವರು,
ದೇಶದ್ರೋಹಿ ಎನ್ನುವರು,
ಧರ್ಮ ವಿರೋಧಿ ಎನ್ನುವರು,
ಮುಭಕ್ತನೆನ್ನುವರು,
ಗಂಜಿಗಿರಾಕಿ ಎನ್ನುವರು,
ತಟ್ಟೆ ಕಾಸಿನ ಭಿಕ್ಷುಕ ಎನ್ನುವರು,
ಹಿಜಡಾ ಎನ್ನುವರು,
ಎಡಪಂಥೀಯ ಎನ್ನುವರು,
ಬಲಪಂಥೀಯ ಎನ್ನುವರು,
ತೆವಲು ಬರಹಗಾರ ಎನ್ನುವರು,
ಪಲಾಯನವಾದಿ ಎನ್ನುವರು,
ಪ್ರಚೋದಿಸುವರು,
ಹುಚ್ಚನೆನ್ನುವರು,
ವೈಯಕ್ತಿಕವಾಗಿ ನಿಂದಿಸುವರು…….

ಆಗಲೂ…..

ತುಂಬು ಹೃದಯದಿಂದ ಸ್ವಾಗತಿಸುವವರು,
ಪ್ರೋತ್ಸಾಹಿಸುವವರು,
ಬೆನ್ನು ತಟ್ಟುವವರು,
ಜೊತೆಯಲ್ಲಿ ಬರುವವರು ಇದ್ದೇ ಇರುತ್ತಾರೆ…..

ನಿರ್ಲಿಪ್ತರು,
ನಿರ್ಲಕ್ಷಿಸುವವರು,
ಗಮನಿಸುವವರು,
ಕುತೂಹಲಿಗಳು,
ಎಚ್ಚರಿಸುವವರು,
ಉದಾಸೀನ ಮಾಡುವವರು,
ಇರುತ್ತಾರೆ…..

ಜೊತೆಗೆ
ಬೆಟ್ಟವನ್ನು ಹತ್ತಲು ಬಿಡದೆ….

ಕಾಲೆಳೆಯುವವರು,
ಕಲ್ಲು ಎಸೆಯುವವರು,
ಬಾಣ ಬಿಡುವವರು,
ಹಿತಶತ್ರುಗಳು,
ಮಜಾ ನೋಡುವವರು,
ನಾಶ ಮಾಡಲು ಯತ್ನಿಸುವವರು,
ಕೊಂದೇ ಬಿಡುವವರು,
ಇರುತ್ತಾರೆ…….

ಏಕೆಂದರೆ….

ಅದು ಅಂತಿಂಥ ಬೆಟ್ಟವಲ್ಲ…

ಮಾನವೀಯತೆಯ ಬೆಟ್ಟ,
ಜೀವಪರ ಬೆಟ್ಟ,
ಮಾನವ ಧರ್ಮದ ಬೆಟ್ಟ,
ಪ್ರಕೃತಿ ಸಹಜ‌ ಸೃಷ್ಟಿಯ ಬೆಟ್ಟ,

ಅಲ್ಲಿಗೆ ತಲುಪಿದ್ದೇ ಆದರೆ,……

ಈ ಪಟ್ಟಭದ್ರ ಹಿತಾಸಕ್ತಿಗಳ ಮಾನವ ನಿರ್ಮಿತ ಚಿಕ್ಕ ಚಿಕ್ಕ ಬೆಟ್ಟಗಳು ಕುಸಿಯುತ್ತವೆ,
ಕೃತಕ ಗೋಡೆಗಳು ಉದುರಿ ಬೀಳುತ್ತವೆ.
ಅಸ್ತಿತ್ವವೇ ಇಲ್ಲವಾಗುತ್ತದೆ.

ಆದರೂ……

ಹತ್ತಲೇ ಬೇಕಿದೆ ಆ ಬೆಟ್ಟವನ್ನು,
ಆ ಕನಸಿನಾ ಬೆಟ್ಟವನ್ನು,
ಬನ್ನಿ ನನ್ನೊಂದಿಗೆ…..
ನಾನು ನಿಮ್ಮೊಂದಿಗೆ…..
ಪ್ರಯತ್ನಿಸುತ್ತಲೇ ಇರೋಣ….
ನಿರಂತರವಾಗಿ….
ಬೆಟ್ಟದ ತುದಿ ತಲುಪುವವರೆಗೂ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

8 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago