Categories: ಲೇಖನ

ಬೆಟ್ಟವನ್ನು ಏರಬೇಕಾಗಿದೆ……ಬೆಟ್ಟದ ತುದಿ ತಲುಪುವವರೆಗೂ……

ಬಹುದೊಡ್ಡ ಬೆಟ್ಟವೊಂದನ್ನು,

ಬಹುದೂರದ ಅತ್ಯಂತ ಎತ್ತರದ ಬೆಟ್ಟವನ್ನು,
ಕಲ್ಲು ಮುಳ್ಳುನ ಹಾದಿಯ ಬೆಟ್ಟವನ್ನು,….

ಬುದ್ದ ಯೇಸು ಪೈಗಂಬರ್ ಬಸವ ಗಾಂಧಿ ಅಂಬೇಡ್ಕರ್ ಗುರುನಾನಕ್ ವಿವೇಕಾನಂದ ಮುಂತಾದ ಘಟಾನುಘಟಿಗಳು ಅರ್ಧ ದಾರಿಯಲ್ಲೇ ನಿಲ್ಲಿಸಿದ ಬೆಟ್ಟವನ್ನು ಏರಬೇಕಾಗಿದೆ….

ಖುರಾನ್ ಬೈಬಲ್ ವೇದ ಉಪನಿಷತ್ತುಗಳು ಮಾರ್ಗ ತೋರುವಲ್ಲಿ, ಪರಿಣಾಮ ಬೀರುವಲ್ಲಿ, ಫಲಿತಾಂಶ ನೀಡುವಲ್ಲಿ ವಿಫಲವಾದ ಬೆಟ್ಟವನ್ನು……

ಅದಕ್ಕಾಗಿ….

ಜನರ ಮನಸ್ಸುಗಳ ಒಳಗೆ ಇಳಿಯಬೇಕಿದೆ….

ಅವರ ಹೃದಯದ ಬಾಗಿಲನ್ನು ತಟ್ಟಬೇಕಿದೆ…

ಅವರ ಪ್ರತಿರೋಧವನ್ನು ಎದುರಿಸಬೇಕಿದೆ….

ಅವರ ನಿಂದನೆಯನ್ನು ಸಹಿಸಬೇಕಿದೆ…..

ಅವರ ಆರೋಪಗಳನ್ನು ಕೇಳಿಸಿಕೊಳ್ಳಬೇಕಿದೆ….

ಅವರ ಅಜ್ಞಾನಕ್ಕೆ ಮರುಕಪಡಬೇಕಾಗಿದೆ….

ಅವರ ಉಡಾಫೆತನವನ್ನು ನಿರ್ಲಕ್ಷಿಸಬೇಕಾಗಿದೆ…..

ಅವರ ಮೌಢ್ಯವನ್ನು ಅರ್ಥಮಾಡಿಸಬೇಕಿದೆ…

ಅವರ ನಂಬಿಕೆಯನ್ನು ಪ್ರಶ್ನಿಸಬೇಕಿದೆ….

ಅವರು ನೀಡುವ ನೋವನ್ನು ನುಂಗಬೇಕಿದೆ…

ಅವರಿಗೆ ಪ್ರೀತಿಯನ್ನು ಹಂಚಬೇಕಿದೆ…….

ಅದಕ್ಕಾಗಿ…….

ವಿಶ್ರಾಂತಿ ಪಡೆಯುವಂತಿಲ್ಲ,…

ಸುಖ ಬಯಸುವಂತಿಲ್ಲ…

ತಾಳ್ಮೆಗೆಡುವಂತಿಲ್ಲ…..

ಪ್ರಶಸ್ತಿ ಸ್ವೀಕರಿಸುವಂತಿಲ್ಲ…

ಸನ್ಮಾನಕ್ಕೆ ಹಾತೊರೆಯುವಂತಿಲ್ಲ…

ಅಧಿಕಾರಕ್ಕಾಗಿ ಹೊಡೆದಾಡುವಂತಿಲ್ಲ…..

ಪ್ರಚಾರಕ್ಕೆ ಹಲ್ಲುಗಿಂಜುವಂತಿಲ್ಲ…..

ಆ ಮಾರ್ಗದಲ್ಲಿ……..

ಬ್ರಾಹ್ಮಣರನ್ನು ಟೀಕಿಸಬೇಕಾಗುತ್ತದೆ…..

ದಲಿತರನ್ನೂ ಪ್ರಶ್ನಿಸಬೇಕಾಗುತ್ತದೆ……

ಒಕ್ಕಲಿಗರನ್ನು ನಿಂದಿಸಬೇಕಾಗುತ್ತದೆ…

ಲಿಂಗಾಯಿತರನ್ನು ಎಚ್ಚರಿಸಬೇಕಾಗುತ್ತದೆ…..

ಕುರುಬರನ್ನು ಕುಟುಕಬೇಕಾಗುತ್ತದೆ….

ಎಲ್ಲಾ ಜಾತಿಗಳವರನ್ನು ಹೀಗಳೆಯಬೇಕಾಗುತ್ತದೆ….

ಮಹಿಳೆಯರಿಗೂ ಬುದ್ದಿ ಹೇಳಬೇಕಾಗುತ್ತದೆ….

ಪುರುಷರಿಗೆ ಗದರಿಸಬೇಕಾಗುತ್ತದೆ…..

ಮಕ್ಕಳಿಗೆ ಕಲಿಸಬೇಕಾಗುತ್ತದೆ…..

ರೈತರನ್ನು ದಡ್ಡರೆನ್ನಬೇಕಾಗುತ್ತದೆ….

ಕಾರ್ಮಿಕರನ್ನು ಜಗಳಗಂಟರು ಎಂದು ದೂರಬೇಕಾಗುತ್ತದೆ….

ಧಾರ್ಮಿಕ ನಾಯಕರ ಮುಖವಾಡ ಕಳಚಬೇಕಾಗುತ್ತದೆ….

ಸಿನಿಮಾ ನಟನಟಿಯರ ಬಣ್ಣ ಬಯಲುಮಾಡಬೇಕಾಗುತ್ತದೆ…

ದೇವರ ಅಸ್ತಿತ್ವವನ್ನೂ ಕೇಳಬೇಕಾಗುತ್ತದೆ…..

ರಾಜಕಾರಣಿಗಳ ಭ್ರಷ್ಟತೆ ಎತ್ತಿ ತೋರಿಸಬೇಕಾಗುತ್ತದೆ….

ಅಧಿಕಾರಿಗಳ ಹಣದ ಮೋಹ ಖಂಡಿಸಬೇಕಾಗುತ್ತದೆ….

ಸಮಾಜ ಸೇವಕರ ಗೋಮುಖ ವ್ಯಾಘ್ರತನ ವರ್ಣಿಸಬೇಕಾಗುತ್ತದೆ…

ಮತದಾರರ ಸ್ವಾರ್ಥ ಹೇಳಲೇಬೇಕಾಗುತ್ತದೆ…

ಇದರ ನಡುವೆ………..

ಎಡಬಿಡಂಗಿ ಎನ್ನುವರು,
ದೇಶದ್ರೋಹಿ ಎನ್ನುವರು,
ಧರ್ಮ ವಿರೋಧಿ ಎನ್ನುವರು,
ಮುಭಕ್ತನೆನ್ನುವರು,
ಗಂಜಿಗಿರಾಕಿ ಎನ್ನುವರು,
ತಟ್ಟೆ ಕಾಸಿನ ಭಿಕ್ಷುಕ ಎನ್ನುವರು,
ಹಿಜಡಾ ಎನ್ನುವರು,
ಎಡಪಂಥೀಯ ಎನ್ನುವರು,
ಬಲಪಂಥೀಯ ಎನ್ನುವರು,
ತೆವಲು ಬರಹಗಾರ ಎನ್ನುವರು,
ಪಲಾಯನವಾದಿ ಎನ್ನುವರು,
ಪ್ರಚೋದಿಸುವರು,
ಹುಚ್ಚನೆನ್ನುವರು,
ವೈಯಕ್ತಿಕವಾಗಿ ನಿಂದಿಸುವರು…….

ಆಗಲೂ…..

ತುಂಬು ಹೃದಯದಿಂದ ಸ್ವಾಗತಿಸುವವರು,
ಪ್ರೋತ್ಸಾಹಿಸುವವರು,
ಬೆನ್ನು ತಟ್ಟುವವರು,
ಜೊತೆಯಲ್ಲಿ ಬರುವವರು ಇದ್ದೇ ಇರುತ್ತಾರೆ…..

ನಿರ್ಲಿಪ್ತರು,
ನಿರ್ಲಕ್ಷಿಸುವವರು,
ಗಮನಿಸುವವರು,
ಕುತೂಹಲಿಗಳು,
ಎಚ್ಚರಿಸುವವರು,
ಉದಾಸೀನ ಮಾಡುವವರು,
ಇರುತ್ತಾರೆ…..

ಜೊತೆಗೆ
ಬೆಟ್ಟವನ್ನು ಹತ್ತಲು ಬಿಡದೆ….

ಕಾಲೆಳೆಯುವವರು,
ಕಲ್ಲು ಎಸೆಯುವವರು,
ಬಾಣ ಬಿಡುವವರು,
ಹಿತಶತ್ರುಗಳು,
ಮಜಾ ನೋಡುವವರು,
ನಾಶ ಮಾಡಲು ಯತ್ನಿಸುವವರು,
ಕೊಂದೇ ಬಿಡುವವರು,
ಇರುತ್ತಾರೆ…….

ಏಕೆಂದರೆ….

ಅದು ಅಂತಿಂಥ ಬೆಟ್ಟವಲ್ಲ…

ಮಾನವೀಯತೆಯ ಬೆಟ್ಟ,
ಜೀವಪರ ಬೆಟ್ಟ,
ಮಾನವ ಧರ್ಮದ ಬೆಟ್ಟ,
ಪ್ರಕೃತಿ ಸಹಜ‌ ಸೃಷ್ಟಿಯ ಬೆಟ್ಟ,

ಅಲ್ಲಿಗೆ ತಲುಪಿದ್ದೇ ಆದರೆ,……

ಈ ಪಟ್ಟಭದ್ರ ಹಿತಾಸಕ್ತಿಗಳ ಮಾನವ ನಿರ್ಮಿತ ಚಿಕ್ಕ ಚಿಕ್ಕ ಬೆಟ್ಟಗಳು ಕುಸಿಯುತ್ತವೆ,
ಕೃತಕ ಗೋಡೆಗಳು ಉದುರಿ ಬೀಳುತ್ತವೆ.
ಅಸ್ತಿತ್ವವೇ ಇಲ್ಲವಾಗುತ್ತದೆ.

ಆದರೂ……

ಹತ್ತಲೇ ಬೇಕಿದೆ ಆ ಬೆಟ್ಟವನ್ನು,
ಆ ಕನಸಿನಾ ಬೆಟ್ಟವನ್ನು,
ಬನ್ನಿ ನನ್ನೊಂದಿಗೆ…..
ನಾನು ನಿಮ್ಮೊಂದಿಗೆ…..
ಪ್ರಯತ್ನಿಸುತ್ತಲೇ ಇರೋಣ….
ನಿರಂತರವಾಗಿ….
ಬೆಟ್ಟದ ತುದಿ ತಲುಪುವವರೆಗೂ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

5 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

9 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

11 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

13 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago