ಬೆಟ್ಟಿಂಗ್ ಚಟಕ್ಕೆ ದಾಸನಾಗಿ 2.40 ಕೋಟಿ ಸಾಲ ಮಾಡಿದ್ದ ಮಗ: ಮಗ ಮಾಡಿದ್ದ ಸಾಲ‌ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಪೋಷಕರು

ಆನ್‌ಲೈನ್ ಜೂಜಾಟದ ಮೂಲಕ ತಮ್ಮ 22 ವರ್ಷದ ಮಗ ಮಾಡಿದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ವಿವಾಹಿತ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಯು.ಮಹೇಶ್ವರ ರೆಡ್ಡಿ (45) ಮತ್ತು ಅವರ ಪತ್ನಿ ಮಂಗಳವಾರ ರಾತ್ರಿ ನಂದ್ಯಾಲ ಜಿಲ್ಲೆಯ ಅಬ್ದುಲ್ಲಾಪುರಂ ಗ್ರಾಮದ ತಮ್ಮ ಜಮೀನಿನಲ್ಲಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ.

ಮಹೇಶ್ವರ್ ಮತ್ತು ಪ್ರಶಾಂತಿ ದಂಪತಿಯ ಪುತ್ರ ನಿಖಿಲ್. ಪದವಿಗಾಗಿ ಬೆಂಗಳೂರಿಗೆ ಕಳುಹಿಸಿದಾಗ ಬೆಟ್ಟಿಂಗ್ ಚಟಕ್ಕೆ ಬಿದ್ದು ₹2.40 ಕೋಟಿ ಸಾಲ ಮಾಡಿಕೊಂಡಿದ್ದಾನೆ.

ಮಗ ಮಾಡಿದ ಕೋಟ್ಯಂತರ ರೂಪಾಯಿ ಸಾಲ ತೀರಿಸಲಾಗದೆ ದಂಪತಿಗಳು ಕೀಟನಾಶಕ ಬೆರೆಸಿದ ತಂಪು ಪಾನೀಯ ಸೇವಿಸಿದ್ದಾರೆ ಎಂದು ಆತ್ಮಕೂರು ಉಪವಿಭಾಗದ ಪೊಲೀಸ್ ಅಧಿಕಾರಿ ರಾಮಾಂಜಿ ನಾಯ್ಕ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಹೇಶ್ವರ್ ರೆಡ್ಡಿ ಈಗಾಗಲೇ 2 ಕೋಟಿ ರೂಪಾಯಿ ಸಾಲವನ್ನು ತೀರಿಸಲು ತನ್ನ ಐದು ಎಕರೆ ಜಮೀನನ್ನು ಮಾರಾಟ ಮಾಡಿದ್ದರು. ಉಳಿದ ಸಾಲಗಳನ್ನು ತೀರಿಸಲು ಪಾಲಕರು ತಮ್ಮ 10 ಎಕರೆ ಜಮೀನು, ಮನೆ ಮಾರಿದರೂ ಸಾಲ ತೀರಿಸಲು ಆಗಲಿಲ್ಲ.

ಕಳೆದ ಆರು ತಿಂಗಳಿನಿಂದ, ದಂಪತಿಗಳು ಸಂಬಂಧಿಕರೊಂದಿಗೆ ವಾಸಿಸುತ್ತಿದ್ದರು, ಮಗ ಹೈದರಾಬಾದ್‌ನಲ್ಲಿ ನೆಲೆಸಿದ್ದನು.

ಸಾಲ ಕೊಟ್ಟವರ ಒತ್ತಡ ಹೆಚ್ಚಾದ ಕಾರಣ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

22 minutes ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

26 minutes ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

7 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

16 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago