Categories: Home

ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಇಂದಿನಿಂದ “ದೊಡ್ಡಬಳ್ಳಾಪುರ ಸೀರೆ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

1 hour ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

5 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

6 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

12 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

23 hours ago