Categories: Home

ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

18 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

23 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago