Categories: Home

ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

5 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

17 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

17 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

22 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 days ago