Categories: Home

ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

27 minutes ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

12 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

13 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

14 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

18 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 day ago