Categories: Home

ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

3 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

4 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

16 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

16 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

16 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago