Categories: Home

ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago