ಬೆಲೆಬಾಳುವ ಮೂರು ಹಸು ಸೇರಿದಂತೆ ಒಂದು ಎಮ್ಮೆ ಕರು ದಿಢೀರ್ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಗುಂಜೂರು ಗ್ರಾಮದ ಹೊರವಲಯದಲ್ಲಿರುವ ಮುನಿಯಪ್ಪ ಎಂಬುವವರ ತೋಟದ ಮನೆಯಲ್ಲಿ ಸುಮಾರು 10 ಹಸುಗಳನ್ನು ಸಾಕಲಾಗಿದ್ದು, ಇಂದು ಎಂದಿನಂತೆ ಹಸುಗಳ ಮೈ ತೊಳೆದು, ಬೂಸ ನೀರು ಇಟ್ಟು ಶೆಡ್ಡಿನೊಳಗೆ ಕರೆದೊಯ್ಯುವಾಗ ದಿಢೀರನೆ ಮೂರು ಹಸು ಸೇರಿದಂತೆ ಒಂದು ಎಮ್ಮೆ ಕರು ಕುಸಿದು ಬಿದ್ದು ಸಾವನ್ನಪ್ಪಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸದ್ಯ ಹಸುಗಳ ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಇನ್ನು ಮೂರ್ನಾಲ್ಕು ಹಸುಗಳು ನಿತ್ರಾಣವಾಗಿದ್ದು, ಸ್ಥಳಕ್ಕೆ ಪಶು ವೈದ್ಯರು ಆಗಮಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ನೀರಿಗೆ ವಿಷ ಬೇರಿಸಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಪ್ರಯೋಗಾಲಯದ ವರದಿ ಬಂದ ನಂತರ ಹಸುಗಳ ಸಾವಿನ ನಿಖರ ಕಾರಣ ತಿಳಿಯಲಿದೆ. ಸಾವನ್ನಪ್ಪಿದ ಹಸುಗಳಿಗೆ ಇನ್ಸೂರೆನ್ಸ್ ಇಲ್ಲದಿದ್ದಲ್ಲಿ ಕಾಮಧೇನು ವಿಪತ್ತು ಯೋಜನೆಯಡಿ ಪ್ರತಿ ಹಸುವಿಗೆ 15 ಸಾವಿರ ಪರಿಹಾರದ ಹಣವನ್ನು ಸರ್ಕಾರದಿಂದ ನೀಡಲಾಗುವುದು, ಹಸುವಿನ ಮಾಲೀಕನಿಗೆ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡುವುದಾಗಿ ಪಶು ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…