ಬೆಲೆಬಾಳುವ ಮೂರು ಹಸುಗಳು ಸೇರಿದಂತೆ‌‌ ಒಂದು ಎಮ್ಮೆ ಕರು ದಿಢೀರ್ ಸಾವು

ಬೆಲೆಬಾಳುವ ಮೂರು ಹಸು ಸೇರಿದಂತೆ ಒಂದು ಎಮ್ಮೆ ಕರು ದಿಢೀರ್ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಗುಂಜೂರು ಗ್ರಾಮದ ಹೊರವಲಯದಲ್ಲಿರುವ ಮುನಿಯಪ್ಪ ಎಂಬುವವರ ತೋಟದ ಮನೆಯಲ್ಲಿ ಸುಮಾರು 10 ಹಸುಗಳನ್ನು ಸಾಕಲಾಗಿದ್ದು, ಇಂದು ಎಂದಿನಂತೆ ಹಸುಗಳ ಮೈ ತೊಳೆದು, ಬೂಸ ನೀರು ಇಟ್ಟು ಶೆಡ್ಡಿನೊಳಗೆ ಕರೆದೊಯ್ಯುವಾಗ ದಿಢೀರನೆ ಮೂರು ಹಸು ಸೇರಿದಂತೆ ಒಂದು ಎಮ್ಮೆ ಕರು ಕುಸಿದು ಬಿದ್ದು ಸಾವನ್ನಪ್ಪಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸದ್ಯ ಹಸುಗಳ ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಇನ್ನು ಮೂರ್ನಾಲ್ಕು ಹಸುಗಳು ನಿತ್ರಾಣವಾಗಿದ್ದು, ಸ್ಥಳಕ್ಕೆ ಪಶು‌ ವೈದ್ಯರು ಆಗಮಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ನೀರಿಗೆ ವಿಷ ಬೇರಿಸಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಪ್ರಯೋಗಾಲಯದ ವರದಿ ಬಂದ ನಂತರ ಹಸುಗಳ ಸಾವಿನ ನಿಖರ ಕಾರಣ ತಿಳಿಯಲಿದೆ. ಸಾವನ್ನಪ್ಪಿದ ಹಸುಗಳಿಗೆ ಇನ್ಸೂರೆನ್ಸ್ ಇಲ್ಲದಿದ್ದಲ್ಲಿ ಕಾಮಧೇನು ವಿಪತ್ತು ಯೋಜನೆಯಡಿ ಪ್ರತಿ ಹಸುವಿಗೆ 15 ಸಾವಿರ ಪರಿಹಾರದ ಹಣವನ್ನು ಸರ್ಕಾರದಿಂದ ನೀಡಲಾಗುವುದು, ಹಸುವಿನ ಮಾಲೀಕನಿಗೆ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡುವುದಾಗಿ ಪಶು ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

6 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago