Categories: ಕೋಲಾರ

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರದ ಬಿಜೆಪಿ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಹೆಚ್ಚಳ ಮಾಡಿರುವ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರಿದ್ ರವರ ನೇತೃತ್ವದಲ್ಲಿ ಶುಕ್ರವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು,

ಈ ಸಂದರ್ಭದಲ್ಲಿ ಸೈಯದ್ ಆಫ್ರೀದ್ ಮಾತನಾಡಿ, ಬಿಜೆಪಿ ಸರ್ಕಾರವು ಜನಸಾಮಾನ್ಯರ ವಿರೋಧಿ ಸರ್ಕಾರವಾಗಿದೆ ಅಡುಗೆ ಅನಿಲ ಸಿಲಿಂಡರ್‌, ಪೆಟ್ರೋಲ್, ಡೀಸೆಲ್‌ ದರ ಹೆಚ್ಚಳದಿಂದ ಬಡವರ ಗಾಯದ ಮೇಲೆ ಬರೆ ಎಳೆದಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಿದ್ದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರವು ತಕ್ಷಣವೇ ಪೆಟ್ರೋಲ್‌, ಡೀಸೆಲ್‌ ದರ ಇಳಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಬಿಜೆಪಿ ಸರ್ಕಾರವು ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಅದನ್ನು ಬಿಜೆಪಿ ವಿರೋಧಿಸಿ ಹೋರಾಟ ಮಾಡಬೇಕು. ಬದಲಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ. ಜನಾಕ್ರೋಶ ಯಾತ್ರೆಯ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಜನರಿಗೆ ಯಾರು ಬೆಲೆ ಏರಿಕೆ ಮಾಡಿದ್ದಾರೆ ಎಂಬುದು ಗೊತ್ತು ಅದಕ್ಕೆ ಕೇಂದ್ರದ ವಿರುದ್ದ ಈಗಾಗಲೇ ಬೇಸರ ಹೊರ ಹಾಕುತ್ತಿದ್ದಾರೆ ಬಿಜೆಪಿಗೆ ನೈತಿಕತೆ ಇದ್ದರೆ ಮೊದಲು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಿ, ಕರ್ನಾಟಕಕ್ಕೆ ಕೇಂದ್ರ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದುರಾಡಳಿತ ಬೆಲೆ ಏರಿಕೆಗೆ ಕಾರಣವಾಗಿದೆ. ಕೇಂದ್ರ ಉದ್ಯಮಿಗಳ ಹಿತಾಸಕ್ತಿ ಕಾಪಾಡುವಲ್ಲಿ ನಿರತವಾಗಿದೆ. ಜನಸಾಮಾನ್ಯರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಜನವಿರೋಧಿ ನಡೆಯನ್ನು ಯುವಜನರು ಖಂಡಿಸಬೇಕು. ಕಾಂಗ್ರೆಸ್‌ ಯುವ ಘಟಕದ ಪದಾಧಿಕಾರಿಗಳು ಜನರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್, ಜಿಲ್ಲಾ ಉಪಾಧ್ಯಕ್ಷರಾದ ವಾಸುದೇವರೆಡ್ಡಿ, ತೌಫೀಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಮ್ರಾನ್ ಪಾಷ, ಸಕ್ಲೈನ್, ಷಮ್ಸ್ , ಸಿದ್ದೀಕ್ ತಾಲೂಕು ಅಧ್ಯಕ್ಷ ಸುಹೈಲ್, ನಗರ ಅಧ್ಯಕ್ಷ‌ ಅರ್ಬಾಜ್, ಅಭೀಷೇಕ್, ಮುಸ್ತಫಾ, ಅಬುಬಕರ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

3 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

9 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

15 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago