ಬೆಲೆ ಏರಿಕೆ, ನೀಟ್ ಅಕ್ರಮ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿ ಸರ್ಕಲ್ ಬಳಿ ನಡೆದ ಪ್ರತಿಭಟನೆಗೆ ಕ್ಷೇತ್ರದ ಮಾಜಿ ಶಾಸಕ ವೆಂಕಟರಮಣಯ್ಯ ನೇತೃತ್ವ ವಹಿಸಿದ್ದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ದೇಶದಾದ್ಯಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ದೂರಿದರು.

ಪ್ರತಿಭಟನೆಯ ವೇಳೆ ಕೆಲಕಾಲ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದರು.

Ramesh Babu

Journalist

Recent Posts

ಮಂತ್ರಾಲಯದಿಂದ ಬರ್ತಿದ್ದ ಕಾರಿಂದ ಅಪಘಾತ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸರಣಿ ಆಕ್ಸಿಡೆಂಟ್ .. ಬೈಕ್ ಸವಾರನಿಗೆ ಕಾಲು ಕಟ್.! ಸರಣಿ ಡಿಕ್ಕಿ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಗುರು ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಮರಳುತ್ತಿದ್ದ ಪ್ರಯಾಣಿಕರಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ಕಾರಿಗೆ…

2 hours ago

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ಮಿತ್ರತ್ವ ಅಥವಾ ಸಹಜತೆಗೆ ದ್ರೋಹ....... ಒಂದು ಸಲಹೆ ಮತ್ತು ಮನವಿ..... ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ…

8 hours ago

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

1 day ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

2 days ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

2 days ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

2 days ago