ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು.
ಒಂದು ಬೂದುಕುಂಬಳ ಕಾಯಿ ಸುಮಾರು 4 ರಿಂದ 7 ಕೆ.ಜಿವರೆಗೂ ತೂಗುತ್ತಿದ್ದವು. ಆದರೆ, ಹಬ್ಬ ಮುಕ್ತಾಯವಾದ ನಂತರ ನಗರದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ರಾಶಿ ಗಟ್ಟಲೆ ಬೂದುಕುಂಬಳ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.
ಬೆಲೆ ಇಲ್ಲದ ಸಮಯದಲ್ಲಿ ಟಾಮೊಟೋ ಹಣ್ಣು ಸುರಿಯುವಂತೆ ಈಗ ಬೂದುಕುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ.
‘ಆಯುಧ ಪೂಜೆ ಹೊರತು ಇತರೆ ಸಮಯದಲ್ಲಿ ಸಾಮಾನ್ಯವಾಗಿ ಬೂದುಕುಂಬಳ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಕಾಯಿ ಬೆಳೆಯುವುದನ್ನು ನಿಲ್ಲಿಸಬೇಕು. ಕನಿಷ್ಟ ಪ್ರದೇಶದಲ್ಲಿ ಮಾತ್ರ ಹಬ್ಬದ ಸಮಯಕ್ಕಾಗಿ ಬೆಳೆಯಬೇಕು. ಕಾರ್ಮಿಕರ ಕೊರತೆ, ದುಬಾರಿ ರಸಗೊಬ್ಬರದ ಸಮಯದಲ್ಲಿ ರೈತರು ಬೆಳೆ ಬೆಳೆದೂ ಸಹ ಸಂಕಷ್ಟಕ್ಕೆ ಸಿಲುಕುಂತಾಗಬಾರದು’ ಎಂದು ಅಲಪನಹಳ್ಳಿ ಗ್ರಾಮದ ರೈತ ಹನುಮೇಗೌಡ ತಿಳಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…