ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು.
ಒಂದು ಬೂದುಕುಂಬಳ ಕಾಯಿ ಸುಮಾರು 4 ರಿಂದ 7 ಕೆ.ಜಿವರೆಗೂ ತೂಗುತ್ತಿದ್ದವು. ಆದರೆ, ಹಬ್ಬ ಮುಕ್ತಾಯವಾದ ನಂತರ ನಗರದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ರಾಶಿ ಗಟ್ಟಲೆ ಬೂದುಕುಂಬಳ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.
ಬೆಲೆ ಇಲ್ಲದ ಸಮಯದಲ್ಲಿ ಟಾಮೊಟೋ ಹಣ್ಣು ಸುರಿಯುವಂತೆ ಈಗ ಬೂದುಕುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ.
‘ಆಯುಧ ಪೂಜೆ ಹೊರತು ಇತರೆ ಸಮಯದಲ್ಲಿ ಸಾಮಾನ್ಯವಾಗಿ ಬೂದುಕುಂಬಳ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಕಾಯಿ ಬೆಳೆಯುವುದನ್ನು ನಿಲ್ಲಿಸಬೇಕು. ಕನಿಷ್ಟ ಪ್ರದೇಶದಲ್ಲಿ ಮಾತ್ರ ಹಬ್ಬದ ಸಮಯಕ್ಕಾಗಿ ಬೆಳೆಯಬೇಕು. ಕಾರ್ಮಿಕರ ಕೊರತೆ, ದುಬಾರಿ ರಸಗೊಬ್ಬರದ ಸಮಯದಲ್ಲಿ ರೈತರು ಬೆಳೆ ಬೆಳೆದೂ ಸಹ ಸಂಕಷ್ಟಕ್ಕೆ ಸಿಲುಕುಂತಾಗಬಾರದು’ ಎಂದು ಅಲಪನಹಳ್ಳಿ ಗ್ರಾಮದ ರೈತ ಹನುಮೇಗೌಡ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…