ಬೆಲೆ ಕುಸಿತ: ಮಾರಾಟವಾಗದೇ ರಸ್ತೆಬದಿ ಪಾಲಾದ ಬೂದುಕುಂಬಳಕಾಯಿಗಳು

ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು.

ಒಂದು ಬೂದುಕುಂಬಳ ಕಾಯಿ ಸುಮಾರು 4 ರಿಂದ 7 ಕೆ.ಜಿವರೆಗೂ ತೂಗುತ್ತಿದ್ದವು. ಆದರೆ, ಹಬ್ಬ ಮುಕ್ತಾಯವಾದ ನಂತರ ನಗರದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ರಾಶಿ ಗಟ್ಟಲೆ ಬೂದುಕುಂಬಳ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.

ದೊಡ್ಡಬಳ್ಳಾಪುರ ಗೌರಿಬಿದಮನೂರು ರಸ್ತೆ, ಚಿಕ್ಕಬಳ್ಳಾಪುರ ರಸ್ತೆಗಳಲ್ಲಿಯೇ ಹೆಚ್ಚಿನ ಬೂದುಕುಂಬಳ ಕಾಯಿಗಳ ರಾಶಿ ಕಂಡುಬರುತ್ತಿವೆ.

ಬೆಲೆ ಇಲ್ಲದ ಸಮಯದಲ್ಲಿ ಟಾಮೊಟೋ ಹಣ್ಣು ಸುರಿಯುವಂತೆ ಈಗ ಬೂದುಕುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ.

‘ಆಯುಧ ಪೂಜೆ ಹೊರತು ಇತರೆ ಸಮಯದಲ್ಲಿ ಸಾಮಾನ್ಯವಾಗಿ ಬೂದುಕುಂಬಳ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಕಾಯಿ ಬೆಳೆಯುವುದನ್ನು ನಿಲ್ಲಿಸಬೇಕು. ಕನಿಷ್ಟ ಪ್ರದೇಶದಲ್ಲಿ ಮಾತ್ರ ಹಬ್ಬದ ಸಮಯಕ್ಕಾಗಿ ಬೆಳೆಯಬೇಕು. ಕಾರ್ಮಿಕರ ಕೊರತೆ, ದುಬಾರಿ ರಸಗೊಬ್ಬರದ ಸಮಯದಲ್ಲಿ ರೈತರು ಬೆಳೆ ಬೆಳೆದೂ ಸಹ ಸಂಕಷ್ಟಕ್ಕೆ ಸಿಲುಕುಂತಾಗಬಾರದು’ ಎಂದು ಅಲಪನಹಳ್ಳಿ ಗ್ರಾಮದ ರೈತ ಹನುಮೇಗೌಡ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

17 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago