ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು.
ಒಂದು ಬೂದುಕುಂಬಳ ಕಾಯಿ ಸುಮಾರು 4 ರಿಂದ 7 ಕೆ.ಜಿವರೆಗೂ ತೂಗುತ್ತಿದ್ದವು. ಆದರೆ, ಹಬ್ಬ ಮುಕ್ತಾಯವಾದ ನಂತರ ನಗರದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ರಾಶಿ ಗಟ್ಟಲೆ ಬೂದುಕುಂಬಳ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.
ಬೆಲೆ ಇಲ್ಲದ ಸಮಯದಲ್ಲಿ ಟಾಮೊಟೋ ಹಣ್ಣು ಸುರಿಯುವಂತೆ ಈಗ ಬೂದುಕುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ.
‘ಆಯುಧ ಪೂಜೆ ಹೊರತು ಇತರೆ ಸಮಯದಲ್ಲಿ ಸಾಮಾನ್ಯವಾಗಿ ಬೂದುಕುಂಬಳ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಕಾಯಿ ಬೆಳೆಯುವುದನ್ನು ನಿಲ್ಲಿಸಬೇಕು. ಕನಿಷ್ಟ ಪ್ರದೇಶದಲ್ಲಿ ಮಾತ್ರ ಹಬ್ಬದ ಸಮಯಕ್ಕಾಗಿ ಬೆಳೆಯಬೇಕು. ಕಾರ್ಮಿಕರ ಕೊರತೆ, ದುಬಾರಿ ರಸಗೊಬ್ಬರದ ಸಮಯದಲ್ಲಿ ರೈತರು ಬೆಳೆ ಬೆಳೆದೂ ಸಹ ಸಂಕಷ್ಟಕ್ಕೆ ಸಿಲುಕುಂತಾಗಬಾರದು’ ಎಂದು ಅಲಪನಹಳ್ಳಿ ಗ್ರಾಮದ ರೈತ ಹನುಮೇಗೌಡ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…