ಬೆಲೆ ಕುಸಿತ: ಮಾರಾಟವಾಗದೇ ರಸ್ತೆಬದಿ ಪಾಲಾದ ಬೂದುಕುಂಬಳಕಾಯಿಗಳು

ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು.

ಒಂದು ಬೂದುಕುಂಬಳ ಕಾಯಿ ಸುಮಾರು 4 ರಿಂದ 7 ಕೆ.ಜಿವರೆಗೂ ತೂಗುತ್ತಿದ್ದವು. ಆದರೆ, ಹಬ್ಬ ಮುಕ್ತಾಯವಾದ ನಂತರ ನಗರದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ರಾಶಿ ಗಟ್ಟಲೆ ಬೂದುಕುಂಬಳ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.

ದೊಡ್ಡಬಳ್ಳಾಪುರ ಗೌರಿಬಿದಮನೂರು ರಸ್ತೆ, ಚಿಕ್ಕಬಳ್ಳಾಪುರ ರಸ್ತೆಗಳಲ್ಲಿಯೇ ಹೆಚ್ಚಿನ ಬೂದುಕುಂಬಳ ಕಾಯಿಗಳ ರಾಶಿ ಕಂಡುಬರುತ್ತಿವೆ.

ಬೆಲೆ ಇಲ್ಲದ ಸಮಯದಲ್ಲಿ ಟಾಮೊಟೋ ಹಣ್ಣು ಸುರಿಯುವಂತೆ ಈಗ ಬೂದುಕುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ.

‘ಆಯುಧ ಪೂಜೆ ಹೊರತು ಇತರೆ ಸಮಯದಲ್ಲಿ ಸಾಮಾನ್ಯವಾಗಿ ಬೂದುಕುಂಬಳ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಕಾಯಿ ಬೆಳೆಯುವುದನ್ನು ನಿಲ್ಲಿಸಬೇಕು. ಕನಿಷ್ಟ ಪ್ರದೇಶದಲ್ಲಿ ಮಾತ್ರ ಹಬ್ಬದ ಸಮಯಕ್ಕಾಗಿ ಬೆಳೆಯಬೇಕು. ಕಾರ್ಮಿಕರ ಕೊರತೆ, ದುಬಾರಿ ರಸಗೊಬ್ಬರದ ಸಮಯದಲ್ಲಿ ರೈತರು ಬೆಳೆ ಬೆಳೆದೂ ಸಹ ಸಂಕಷ್ಟಕ್ಕೆ ಸಿಲುಕುಂತಾಗಬಾರದು’ ಎಂದು ಅಲಪನಹಳ್ಳಿ ಗ್ರಾಮದ ರೈತ ಹನುಮೇಗೌಡ ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

16 minutes ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

3 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

15 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

16 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

19 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

21 hours ago