ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು.
ಒಂದು ಬೂದುಕುಂಬಳ ಕಾಯಿ ಸುಮಾರು 4 ರಿಂದ 7 ಕೆ.ಜಿವರೆಗೂ ತೂಗುತ್ತಿದ್ದವು. ಆದರೆ, ಹಬ್ಬ ಮುಕ್ತಾಯವಾದ ನಂತರ ನಗರದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ರಾಶಿ ಗಟ್ಟಲೆ ಬೂದುಕುಂಬಳ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.
ಬೆಲೆ ಇಲ್ಲದ ಸಮಯದಲ್ಲಿ ಟಾಮೊಟೋ ಹಣ್ಣು ಸುರಿಯುವಂತೆ ಈಗ ಬೂದುಕುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ.
‘ಆಯುಧ ಪೂಜೆ ಹೊರತು ಇತರೆ ಸಮಯದಲ್ಲಿ ಸಾಮಾನ್ಯವಾಗಿ ಬೂದುಕುಂಬಳ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಕಾಯಿ ಬೆಳೆಯುವುದನ್ನು ನಿಲ್ಲಿಸಬೇಕು. ಕನಿಷ್ಟ ಪ್ರದೇಶದಲ್ಲಿ ಮಾತ್ರ ಹಬ್ಬದ ಸಮಯಕ್ಕಾಗಿ ಬೆಳೆಯಬೇಕು. ಕಾರ್ಮಿಕರ ಕೊರತೆ, ದುಬಾರಿ ರಸಗೊಬ್ಬರದ ಸಮಯದಲ್ಲಿ ರೈತರು ಬೆಳೆ ಬೆಳೆದೂ ಸಹ ಸಂಕಷ್ಟಕ್ಕೆ ಸಿಲುಕುಂತಾಗಬಾರದು’ ಎಂದು ಅಲಪನಹಳ್ಳಿ ಗ್ರಾಮದ ರೈತ ಹನುಮೇಗೌಡ ತಿಳಿಸಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…