ಬೆಳಂಬೆಳಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪ್ರದೇಶದ ನಗರಗೆರೆ ಬಳಿಯ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂವರು ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37), ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಕುಮಾರ್ ಎಂಬುವರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸದ್ಯ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಯಲ್ಲಿ ವ್ಯಕ್ತಿಯೋರ್ವನು ತಿರುವು ಕೆಳಗಿನ ಹಳ್ಳದಲ್ಲಿರುವ ಮರದ ಮೇಲೆ ನೇತಾಡುತ್ತಿದ್ದು ಎಲ್ಲರ ಕಣ್ಣಲ್ಲಿ ನೀರು ಬರುವಂತೆ ಮಾಡಿದೆ.
ಸದ್ಯ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…