ಬೆಳಂಬೆಳಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪ್ರದೇಶದ ನಗರಗೆರೆ ಬಳಿಯ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂವರು ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37), ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಕುಮಾರ್ ಎಂಬುವರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸದ್ಯ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಯಲ್ಲಿ ವ್ಯಕ್ತಿಯೋರ್ವನು ತಿರುವು ಕೆಳಗಿನ ಹಳ್ಳದಲ್ಲಿರುವ ಮರದ ಮೇಲೆ ನೇತಾಡುತ್ತಿದ್ದು ಎಲ್ಲರ ಕಣ್ಣಲ್ಲಿ ನೀರು ಬರುವಂತೆ ಮಾಡಿದೆ.
ಸದ್ಯ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…