ನಗರದ ಪ್ರಮುಖ ವೃತ್ತವಾದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ.) ಸರ್ಕಲ್ ನಲ್ಲಿ ಪ್ರತಿದಿನ ಸಂಜೆ ವೇಳೆ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿಯೊಬ್ಬ ವಾಹನ ಸವಾರ ಜೀವಭಯದಲ್ಲಿ ವೃತ್ತ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸರ್ಕಲ್ ನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಉರಿಯುವುದನ್ನ ಸ್ಥಗಿತಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಯಾವ ಉದ್ದೇಶಕ್ಕಾಗಿ ಸ್ಥಗಿತಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೆ ಏತಕ್ಕಾಗಿ ಆ ಸ್ಥಳದಲ್ಲಿ ಇನ್ನೂ ಟ್ರಾಫಿಕ್ ಸಿಗ್ನಲ್ ಕಂಬಗಳನ್ನ ಇರಿಸಲಾಗಿದೆ?, ಟ್ರಾಫಿಕ್ ಕಂಟ್ರೋಲ್ ಮಾಡಲು ಯಾವೊಬ್ಬ ಸಿಬ್ಬಂದಿ ನಿಯೋಜನೆಗೊಂಡಿರುವುದಿಲ್ಲ. ಏನಾದರೂ, ಯಾರಿಗಾದರೂ ಆ ಸ್ಥಳದಲ್ಲಿ ಅನಾಹುತ ಸಂಭವಿಸಿದರೆ ಮಾತ್ರ ಎಚ್ಚೆತ್ತುಕೊಳ್ಳುವುದು. ಅದನ್ನ ಬಿಟ್ಟರೆ ಅಲ್ಲಿಯತನಕ ಬೇಜವಾಬ್ದಾರಿ ಮೆರೆಯುತ್ತಿರುವುದೇ ಇಲಾಖೆಯ ಕೆಲಸ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…