ಬೆಳಗದ ಸಿಗ್ನಲ್ ದೀಪಗಳು: ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಾಹನ‌ ದಟ್ಟಣೆ: ವಾಹನ ಸವಾರರ ಪರದಾಟ: ಟ್ರಾಫಿಕ್ ಕಂಟ್ರೋಲ್ ಮಾಡದ ಇಲಾಖೆ

ನಗರದ ಪ್ರಮುಖ ವೃತ್ತವಾದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ.) ಸರ್ಕಲ್ ನಲ್ಲಿ ಪ್ರತಿದಿನ ಸಂಜೆ ವೇಳೆ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿಯೊಬ್ಬ ವಾಹನ ಸವಾರ ಜೀವಭಯದಲ್ಲಿ ವೃತ್ತ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸರ್ಕಲ್ ನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಉರಿಯುವುದನ್ನ ಸ್ಥಗಿತಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಯಾವ ಉದ್ದೇಶಕ್ಕಾಗಿ ಸ್ಥಗಿತಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೆ ಏತಕ್ಕಾಗಿ ಆ ಸ್ಥಳದಲ್ಲಿ ಇನ್ನೂ ಟ್ರಾಫಿಕ್ ಸಿಗ್ನಲ್ ಕಂಬಗಳನ್ನ ಇರಿಸಲಾಗಿದೆ?, ಟ್ರಾಫಿಕ್ ಕಂಟ್ರೋಲ್ ಮಾಡಲು ಯಾವೊಬ್ಬ ಸಿಬ್ಬಂದಿ ನಿಯೋಜನೆಗೊಂಡಿರುವುದಿಲ್ಲ. ಏನಾದರೂ, ಯಾರಿಗಾದರೂ ಆ ಸ್ಥಳದಲ್ಲಿ ಅನಾಹುತ ಸಂಭವಿಸಿದರೆ ಮಾತ್ರ ಎಚ್ಚೆತ್ತುಕೊಳ್ಳುವುದು. ಅದನ್ನ ಬಿಟ್ಟರೆ ಅಲ್ಲಿಯತನಕ ಬೇಜವಾಬ್ದಾರಿ ಮೆರೆಯುತ್ತಿರುವುದೇ ಇಲಾಖೆಯ ಕೆಲಸ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೃತ್ತದಲ್ಲಿ ಬೆಂಗಳೂರು-ಹಿಂದೂಪುರ, ತುಮಕೂರು-ಚಿಕ್ಕಬಳ್ಳಾಪುರ, ದೇವನಹಳ್ಳಿ ಸೇರಿದಂತೆ ಇತರೆ ಭಾಗಗಳಿಗೆ ಸಂಚರಿಸುವ ಭಾರೀ ವಾಹನಗಳು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಿಂದ ಕಾರ್ಮಿಕರು ಪ್ರಯಾಣಿಸುವ ಬಸ್ಸುಗಳು ಹಾಗೂ ಎಲ್ಲಾ ರೀತಿಯ ವಾಹನಗಳು ಸಂಚರಿಸುತ್ತವೆ. ಈ ಹಿನ್ನೆಲೆ ಅಪಘಾತ  ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಸಲಾಗಿತ್ತು. ಆದರೆ ಈಗ ಅವು ಬೆಳಗುತ್ತಿಲ್ಲ.

ಟೋಲ್ ರಸ್ತೆಯ ಪ್ರಮುಖ ಜಂಕ್ಷನ್ ಗಳಲ್ಲಿ ಸಿಗ್ನಲ್ ದೀಪ ಅಳವಡಿಸುವಂತೆ ರಾಮಲಿಂಗಂ ಟೋಲ್ ಹಾಗೂ ಕೆಆರ್ ಡಿಸಿಎಲ್ ಅವರಿಗೆ ಪತ್ರ ಬರೆಯಲಾಗಿದೆ. ಒಟ್ಟು 48 ಕೋಟಿ ವೆಚ್ಚದಲ್ಲಿ 7 ಜಂಕ್ಷನ್ ಗಳ ಅಭಿವೃದ್ಧಿ, ಫ್ಯಾಕ್ಟರಿ ಗೇಟಿನಿಂದ ಪಾಲನಜೋಗಹಳ್ಳಿವರೆಗೆ ಬೀದಿ ದೀಪ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವಾಹನ ದಟ್ಟಣೆ ಹಾಗೂ ಸಂಚಾರಿ ನಿಯಮ ಪಾಲನೆಗೆ ಅನುಕೂಲವಾಗುವಂತೆ ನಗರದಲ್ಲಿ ಒಂದು ಸಂಚಾರಿ ಪೊಲೀಸ್ ಠಾಣೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago