ಬೆಳಗದ ಸಿಗ್ನಲ್ ದೀಪಗಳು: ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಾಹನ‌ ದಟ್ಟಣೆ: ವಾಹನ ಸವಾರರ ಪರದಾಟ: ಟ್ರಾಫಿಕ್ ಕಂಟ್ರೋಲ್ ಮಾಡದ ಇಲಾಖೆ

ನಗರದ ಪ್ರಮುಖ ವೃತ್ತವಾದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ.) ಸರ್ಕಲ್ ನಲ್ಲಿ ಪ್ರತಿದಿನ ಸಂಜೆ ವೇಳೆ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿಯೊಬ್ಬ ವಾಹನ ಸವಾರ ಜೀವಭಯದಲ್ಲಿ ವೃತ್ತ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸರ್ಕಲ್ ನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಉರಿಯುವುದನ್ನ ಸ್ಥಗಿತಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಯಾವ ಉದ್ದೇಶಕ್ಕಾಗಿ ಸ್ಥಗಿತಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೆ ಏತಕ್ಕಾಗಿ ಆ ಸ್ಥಳದಲ್ಲಿ ಇನ್ನೂ ಟ್ರಾಫಿಕ್ ಸಿಗ್ನಲ್ ಕಂಬಗಳನ್ನ ಇರಿಸಲಾಗಿದೆ?, ಟ್ರಾಫಿಕ್ ಕಂಟ್ರೋಲ್ ಮಾಡಲು ಯಾವೊಬ್ಬ ಸಿಬ್ಬಂದಿ ನಿಯೋಜನೆಗೊಂಡಿರುವುದಿಲ್ಲ. ಏನಾದರೂ, ಯಾರಿಗಾದರೂ ಆ ಸ್ಥಳದಲ್ಲಿ ಅನಾಹುತ ಸಂಭವಿಸಿದರೆ ಮಾತ್ರ ಎಚ್ಚೆತ್ತುಕೊಳ್ಳುವುದು. ಅದನ್ನ ಬಿಟ್ಟರೆ ಅಲ್ಲಿಯತನಕ ಬೇಜವಾಬ್ದಾರಿ ಮೆರೆಯುತ್ತಿರುವುದೇ ಇಲಾಖೆಯ ಕೆಲಸ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೃತ್ತದಲ್ಲಿ ಬೆಂಗಳೂರು-ಹಿಂದೂಪುರ, ತುಮಕೂರು-ಚಿಕ್ಕಬಳ್ಳಾಪುರ, ದೇವನಹಳ್ಳಿ ಸೇರಿದಂತೆ ಇತರೆ ಭಾಗಗಳಿಗೆ ಸಂಚರಿಸುವ ಭಾರೀ ವಾಹನಗಳು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಿಂದ ಕಾರ್ಮಿಕರು ಪ್ರಯಾಣಿಸುವ ಬಸ್ಸುಗಳು ಹಾಗೂ ಎಲ್ಲಾ ರೀತಿಯ ವಾಹನಗಳು ಸಂಚರಿಸುತ್ತವೆ. ಈ ಹಿನ್ನೆಲೆ ಅಪಘಾತ  ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಸಲಾಗಿತ್ತು. ಆದರೆ ಈಗ ಅವು ಬೆಳಗುತ್ತಿಲ್ಲ.

ಟೋಲ್ ರಸ್ತೆಯ ಪ್ರಮುಖ ಜಂಕ್ಷನ್ ಗಳಲ್ಲಿ ಸಿಗ್ನಲ್ ದೀಪ ಅಳವಡಿಸುವಂತೆ ರಾಮಲಿಂಗಂ ಟೋಲ್ ಹಾಗೂ ಕೆಆರ್ ಡಿಸಿಎಲ್ ಅವರಿಗೆ ಪತ್ರ ಬರೆಯಲಾಗಿದೆ. ಒಟ್ಟು 48 ಕೋಟಿ ವೆಚ್ಚದಲ್ಲಿ 7 ಜಂಕ್ಷನ್ ಗಳ ಅಭಿವೃದ್ಧಿ, ಫ್ಯಾಕ್ಟರಿ ಗೇಟಿನಿಂದ ಪಾಲನಜೋಗಹಳ್ಳಿವರೆಗೆ ಬೀದಿ ದೀಪ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವಾಹನ ದಟ್ಟಣೆ ಹಾಗೂ ಸಂಚಾರಿ ನಿಯಮ ಪಾಲನೆಗೆ ಅನುಕೂಲವಾಗುವಂತೆ ನಗರದಲ್ಲಿ ಒಂದು ಸಂಚಾರಿ ಪೊಲೀಸ್ ಠಾಣೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago