ಬೆಳಗದ ಸಿಗ್ನಲ್ ದೀಪಗಳು: ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಾಹನ‌ ದಟ್ಟಣೆ: ವಾಹನ ಸವಾರರ ಪರದಾಟ: ಟ್ರಾಫಿಕ್ ಕಂಟ್ರೋಲ್ ಮಾಡದ ಇಲಾಖೆ

ನಗರದ ಪ್ರಮುಖ ವೃತ್ತವಾದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ.) ಸರ್ಕಲ್ ನಲ್ಲಿ ಪ್ರತಿದಿನ ಸಂಜೆ ವೇಳೆ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿಯೊಬ್ಬ ವಾಹನ ಸವಾರ ಜೀವಭಯದಲ್ಲಿ ವೃತ್ತ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸರ್ಕಲ್ ನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಉರಿಯುವುದನ್ನ ಸ್ಥಗಿತಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಯಾವ ಉದ್ದೇಶಕ್ಕಾಗಿ ಸ್ಥಗಿತಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೆ ಏತಕ್ಕಾಗಿ ಆ ಸ್ಥಳದಲ್ಲಿ ಇನ್ನೂ ಟ್ರಾಫಿಕ್ ಸಿಗ್ನಲ್ ಕಂಬಗಳನ್ನ ಇರಿಸಲಾಗಿದೆ?, ಟ್ರಾಫಿಕ್ ಕಂಟ್ರೋಲ್ ಮಾಡಲು ಯಾವೊಬ್ಬ ಸಿಬ್ಬಂದಿ ನಿಯೋಜನೆಗೊಂಡಿರುವುದಿಲ್ಲ. ಏನಾದರೂ, ಯಾರಿಗಾದರೂ ಆ ಸ್ಥಳದಲ್ಲಿ ಅನಾಹುತ ಸಂಭವಿಸಿದರೆ ಮಾತ್ರ ಎಚ್ಚೆತ್ತುಕೊಳ್ಳುವುದು. ಅದನ್ನ ಬಿಟ್ಟರೆ ಅಲ್ಲಿಯತನಕ ಬೇಜವಾಬ್ದಾರಿ ಮೆರೆಯುತ್ತಿರುವುದೇ ಇಲಾಖೆಯ ಕೆಲಸ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೃತ್ತದಲ್ಲಿ ಬೆಂಗಳೂರು-ಹಿಂದೂಪುರ, ತುಮಕೂರು-ಚಿಕ್ಕಬಳ್ಳಾಪುರ, ದೇವನಹಳ್ಳಿ ಸೇರಿದಂತೆ ಇತರೆ ಭಾಗಗಳಿಗೆ ಸಂಚರಿಸುವ ಭಾರೀ ವಾಹನಗಳು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಿಂದ ಕಾರ್ಮಿಕರು ಪ್ರಯಾಣಿಸುವ ಬಸ್ಸುಗಳು ಹಾಗೂ ಎಲ್ಲಾ ರೀತಿಯ ವಾಹನಗಳು ಸಂಚರಿಸುತ್ತವೆ. ಈ ಹಿನ್ನೆಲೆ ಅಪಘಾತ  ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಸಲಾಗಿತ್ತು. ಆದರೆ ಈಗ ಅವು ಬೆಳಗುತ್ತಿಲ್ಲ.

ಟೋಲ್ ರಸ್ತೆಯ ಪ್ರಮುಖ ಜಂಕ್ಷನ್ ಗಳಲ್ಲಿ ಸಿಗ್ನಲ್ ದೀಪ ಅಳವಡಿಸುವಂತೆ ರಾಮಲಿಂಗಂ ಟೋಲ್ ಹಾಗೂ ಕೆಆರ್ ಡಿಸಿಎಲ್ ಅವರಿಗೆ ಪತ್ರ ಬರೆಯಲಾಗಿದೆ. ಒಟ್ಟು 48 ಕೋಟಿ ವೆಚ್ಚದಲ್ಲಿ 7 ಜಂಕ್ಷನ್ ಗಳ ಅಭಿವೃದ್ಧಿ, ಫ್ಯಾಕ್ಟರಿ ಗೇಟಿನಿಂದ ಪಾಲನಜೋಗಹಳ್ಳಿವರೆಗೆ ಬೀದಿ ದೀಪ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವಾಹನ ದಟ್ಟಣೆ ಹಾಗೂ ಸಂಚಾರಿ ನಿಯಮ ಪಾಲನೆಗೆ ಅನುಕೂಲವಾಗುವಂತೆ ನಗರದಲ್ಲಿ ಒಂದು ಸಂಚಾರಿ ಪೊಲೀಸ್ ಠಾಣೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

11 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

22 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago