ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಕಣ್ಣು ಮುಚ್ಚಿ ಕೂತಿದ್ದರು. ಆದರೆ ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಅವರ ಕಣ್ಣಿಗೆ ಕಂಡಿದ್ದು ಅದರಲ್ಲೂ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಬೆಳಗಾವಿಯಲ್ಲಿ ಮಹಿಳೆ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಅತ್ಯಂತ ಖಂಡನೀಯ. ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಆ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ ಎಂದಿದ್ದಾರೆ.
ಬೆಳಗಾವಿಯ ಘಟನೆ ಗೊತ್ತಾದ ತಕ್ಷಣವೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂತ್ರಸ್ತೆಯ ಮನೆಗೆ ಭೇಟಿಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ. ಪೊಲೀಸರು ಇಪ್ಪತ್ತನಾಲ್ಕು ಗಂಟೆಗೊಳಗೆ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ. ನಾನೇ ಖುದ್ದಾಗಿ ಈ ಪ್ರಕರಣದ ತನಿಖೆಯ ಮೇಲೆ ನಿಗಾ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯದ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ ಹೀಗಿರುವಾಗ ಘಟನೆ ನಡೆದು ನಾಲ್ಕು ದಿನಗಳನಂತರ ಇದ್ದಕ್ಕಿದ್ದ ಹಾಗೆ ಜೆ.ಪಿ.ನಡ್ಡಾ ಅವರು ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಕೆದಕಲು ಹೊರಟಿರುವುದಕ್ಕೆ ರಾಜಕೀಯ ದುರುದ್ದೇಶ ಕಾರಣವೇ ಹೊರತು ಮಹಿಳೆಯರ ಮೇಲಿನ ಕಾಳಜಿಯಿಂದ ಖಂಡಿತ ಅಲ್ಲ ಎಂದು ತಿಳಿಸಿದ್ದಾರೆ.
ನಡ್ಡಾ ಅವರು ಮಹಿಳೆಯರ ಮೇಲೆ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಮಹಿಳೆಯರ ರಕ್ಷಣೆಯಲ್ಲಿ ವಿಫಲವಾಗಿದ್ದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧವೇ ಕ್ರಮ ಕೈಗೊಳ್ಳಬೇಕಾಗಿತ್ತು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ 17,813 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಅದರ ಹಿಂದಿನ ವರ್ಷ 2021ರಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಅವರದ್ದೇ ಸರ್ಕಾರದ ಮೂಗಿನಡಿಯಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದದ್ದು ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಮಣಿಪುರದಿಂದ ಗುಜರಾತ್ ವರೆಗೆ, ಉತ್ತರಪ್ರದೇಶದಿಂದ ಮಧ್ಯಪ್ರದೇಶದ ವರೆಗೆ ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾಷನಲ್ ಕ್ರೈಮ್ ಬ್ಯುರೋ ವರದಿಗಳೇ ಹೇಳುತ್ತಿವೆ. ಬಿಜೆಪಿ ಸ್ವಭಾವತ: ಮಹಿಳಾ ವಿರೋಧಿ ಎನ್ನುವುದನ್ನು ಈ ಪ್ರಕರಣಗಳು ಸಾಬೀತು ಪಡಿಸಿವೆ ಎಂದರು.
ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರಿದ್ದು ಪಕ್ಷದ ಮಾನಮರ್ಯಾದೆ ಬೀದಿಬೀದಿಗಳಲ್ಲಿ ಹರಾಜಾಗುತ್ತಿದೆ. ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ಪಕ್ಷದ ಹಿರಿಯ ನಾಯಕರೇ ಗಂಭೀರ ಸ್ವರೂಪದ ಆರೋಪಗಳನ್ನು ಮಾಡುತ್ತಿದ್ದಾರೆ. ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ ಎಂದು ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…