ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಕಣ್ಣು ಮುಚ್ಚಿ ಕೂತಿದ್ದರು. ಆದರೆ ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಅವರ ಕಣ್ಣಿಗೆ ಕಂಡಿದ್ದು ಅದರಲ್ಲೂ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಬೆಳಗಾವಿಯಲ್ಲಿ ಮಹಿಳೆ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಅತ್ಯಂತ ಖಂಡನೀಯ. ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಆ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ ಎಂದಿದ್ದಾರೆ.
ಬೆಳಗಾವಿಯ ಘಟನೆ ಗೊತ್ತಾದ ತಕ್ಷಣವೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂತ್ರಸ್ತೆಯ ಮನೆಗೆ ಭೇಟಿಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ. ಪೊಲೀಸರು ಇಪ್ಪತ್ತನಾಲ್ಕು ಗಂಟೆಗೊಳಗೆ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ. ನಾನೇ ಖುದ್ದಾಗಿ ಈ ಪ್ರಕರಣದ ತನಿಖೆಯ ಮೇಲೆ ನಿಗಾ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯದ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ ಹೀಗಿರುವಾಗ ಘಟನೆ ನಡೆದು ನಾಲ್ಕು ದಿನಗಳನಂತರ ಇದ್ದಕ್ಕಿದ್ದ ಹಾಗೆ ಜೆ.ಪಿ.ನಡ್ಡಾ ಅವರು ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಕೆದಕಲು ಹೊರಟಿರುವುದಕ್ಕೆ ರಾಜಕೀಯ ದುರುದ್ದೇಶ ಕಾರಣವೇ ಹೊರತು ಮಹಿಳೆಯರ ಮೇಲಿನ ಕಾಳಜಿಯಿಂದ ಖಂಡಿತ ಅಲ್ಲ ಎಂದು ತಿಳಿಸಿದ್ದಾರೆ.
ನಡ್ಡಾ ಅವರು ಮಹಿಳೆಯರ ಮೇಲೆ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಮಹಿಳೆಯರ ರಕ್ಷಣೆಯಲ್ಲಿ ವಿಫಲವಾಗಿದ್ದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧವೇ ಕ್ರಮ ಕೈಗೊಳ್ಳಬೇಕಾಗಿತ್ತು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ 17,813 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಅದರ ಹಿಂದಿನ ವರ್ಷ 2021ರಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಅವರದ್ದೇ ಸರ್ಕಾರದ ಮೂಗಿನಡಿಯಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದದ್ದು ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಮಣಿಪುರದಿಂದ ಗುಜರಾತ್ ವರೆಗೆ, ಉತ್ತರಪ್ರದೇಶದಿಂದ ಮಧ್ಯಪ್ರದೇಶದ ವರೆಗೆ ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾಷನಲ್ ಕ್ರೈಮ್ ಬ್ಯುರೋ ವರದಿಗಳೇ ಹೇಳುತ್ತಿವೆ. ಬಿಜೆಪಿ ಸ್ವಭಾವತ: ಮಹಿಳಾ ವಿರೋಧಿ ಎನ್ನುವುದನ್ನು ಈ ಪ್ರಕರಣಗಳು ಸಾಬೀತು ಪಡಿಸಿವೆ ಎಂದರು.
ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರಿದ್ದು ಪಕ್ಷದ ಮಾನಮರ್ಯಾದೆ ಬೀದಿಬೀದಿಗಳಲ್ಲಿ ಹರಾಜಾಗುತ್ತಿದೆ. ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ಪಕ್ಷದ ಹಿರಿಯ ನಾಯಕರೇ ಗಂಭೀರ ಸ್ವರೂಪದ ಆರೋಪಗಳನ್ನು ಮಾಡುತ್ತಿದ್ದಾರೆ. ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…