ಸಾಮಾಜಿಕ ಜಾಲತಾಣಗಳಲ್ಲಿ, ಹೆಚ್ಚಾಗಿ ಬೆಳಗಿನ ಹೊತ್ತು ನಮಗೆ ಬರುವ ಬಹುತೇಕ Good Morning Message ಗಳು ಮಹಾನ್ ವ್ಯಕ್ತಿಗಳು ಹೇಳಿರುವ Quotation ಗಳನ್ನು ಒಳಗೊಂಡಿರುತ್ತದೆ.
ಬುದ್ದ, ಬಸವ, ಯೇಸು, ಪೈಗಂಬರ್, ಮಹಾವೀರ, ಅಂಬೇಡ್ಕರ್, ಗಾಂಧಿ, ರೂಮಿ, ಚಾಣಕ್ಯ, ಗಿಬ್ರಾನ್, ಕಾರ್ಲ್ ಮಾರ್ಕ್ಸ್, ಗಾಲಿಬ್, ಸ್ವಾಮಿ ವಿವೇಕಾನಂದ, ಪರಮಹಂಸ, ಸರ್ವಜ್ಞ, ಭಗವದ್ಗೀತೆ, ಆಚಾರ್ಯತ್ರಯರು, ಖುರಾನ್, ಬೈಬಲ್, ಶರಣರು, ದಾಸರು, ಸೂಫಿ ಸಂತರು ಹೀಗೆ ಅನೇಕರ ವಾಣಿಗಳು ನಮಗಿಷ್ಟವಾಗಿವೆ ಎಂದು ಹಾಕುತ್ತೇವೆ.
ಒಂದು ಹಂತಕ್ಕೆ ಇದೆಲ್ಲಾ ಒಳ್ಳೆಯದೆ. ಆದರೆ ಈ ಸಂದೇಶಗಳನ್ನು ಮತ್ತು ಅದನ್ನು ಹೇಳಿರುವವರನ್ನು ನಾವು ಹೇಗೆ ಅರ್ಥಮಾಡಿಕೊಂಡಿದ್ದೇವೆ, ಅದನ್ನು ಹೇಗೆ ಅಳವಡಿಸಿಕೊಂಡಿದ್ದೇವೆ, ಅದರ ಸಾಮಾಜಿಕ ಪ್ರಸ್ತುತತೆ ಏನು ಎಂಬುದನ್ನು ಅದರೊಂದಿಗೆ ಹೇಳಬೇಕಾಗುತ್ತದೆ. ಇಲ್ಲದಿದ್ದರೆ ಅದೊಂದು ಕಾಟಾಚಾರದ ಒಣ ಸಂದೇಶವಾಗುತ್ತದೆ.
ಏಕೆಂದರೆ ಕಾಲದ ನಿರಂತರತೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿರುತ್ತವೆ. ಕೆಲವು ಈಗಲೂ ಪ್ರಸ್ತುತವಾದರೆ, ಕೆಲವು ಸವಕಲು ನಾಣ್ಯಗಳು.
ಮತ್ತೆ ಕೆಲವು ಬದಲಾವಣೆಯಾಗಬೇಕಿದ್ದರೆ, ಇನ್ನೊಂದಿಷ್ಟು ಅಪಾಯಕಾರಿಯೂ ಹೌದು.
ಈ ಎಲ್ಲಾ ವ್ಯಕ್ತಿಗಳು ತಾವು ಜೀವಿಸಿದ್ದ ಕಾಲದ ಸ್ಥಿತಿಗತಿಗೆ ಅನುಗುಣವಾಗಿ ಒಂದಷ್ಟು ದೂರದೃಷಿಯಿಂದ ತಮ್ಮ ಚಿಂತನೆಗಳನ್ನು ದಾಖಲಿಸಿರುತ್ತಾರೆ. ಅದು ಈಗ ಎಷ್ಟರ ಮಟ್ಟಿಗೆ ಅಳವಡಿಕೆಗೆ ಯೋಗ್ಯ ಎಂದು ಯೋಚಿಸಬೇಕಾಗುತ್ತದೆ.
ಉದಾಹರಣೆಗೆ ಆಗ ರಾಜಪ್ರಭುತ್ವ ಈಗ ಪ್ರಜಾಪ್ರಭುತ್ವ, ಆಗ ಕಾಲ್ನಡಿಗೆ ಅಥವಾ ಕುದುರೆ.
ಈಗ ವಿಮಾನ, ಆಗ ಪಾರಿವಾಳ ಇಲ್ಲ ಧೂತ ಸಂದೇಶ ವಾಹಕ, ಈಗ ಇಂಟರ್ ನೆಟ್ – ಮೊಬೈಲ್ ( ಸ್ವಲ್ಪ Techniques ಗೊತ್ತಾದರೆ Fake Photoshop! !??). ಆಗ ಜಾತಿಗಳ ಶ್ರೇಷ್ಠತೆ ಈಗ ಸ್ವಲ್ಪ ಶಿಥಿಲತೆ, ಆಗ ಪ್ರಾಮಾಣಿಕತೆ ಈಗ ಭ್ರಷ್ಟತೆ, ಆಗ ಹೆಣ್ಣು ಎರಡನೇ ದರ್ಜೆ ಈಗ ಆಕೆಯೇ ಎಲ್ಲದರಲ್ಲೂ First Class ( ? ), ಆಗ ದೇವರು ದೊಡ್ಡವನು ಈಗ ಹಣ ಅಧಿಕಾರ ಇದ್ದವನೇ ದೇವರು ………….ಹೀಗೆ ನಾನಾ ರೀತಿಯ ಬದಲಾವಣೆಗಳಾಗಿವೆ.
ಆದ್ದರಿಂದ ಅಪ್ಪ ಹಾಕಿದ ಆಲದ ಮರವೆಂದು ನೇಣು ಹಾಕಿಕೊಳ್ಳದೆ, ಚಿನ್ನದ ಸೂಜಿಯೆಂದು ಕಣ್ಣಿಗೆ ಚುಚ್ಚಿಕೊಳ್ಳದೆ ಈಗಿರುವ ನಿಮ್ಮ ಜ್ಞಾನದ ಮಿತಿಯಲ್ಲಿ ಒಂದಷ್ಟು ವಿವೇಚನೆಯಿಂದ ನಿಮಗೆ ಸರಿ ಎಂಬುದನ್ನು ಸ್ವೀಕರಿಸಿ. ಕೆಲವನ್ನು ಬದಲಾವಣೆ ಮಾಡಿಕೊಳ್ಳಿ ಇಷ್ಟವಿಲ್ಲದಿದ್ದರೆ ತಿರಸ್ಕರಿಸಿ.
ಅನುಭವದ ಆಧಾರದ ಮೇಲೆ ಎಲ್ಲಾ ಉತ್ತಮ ಅಂಶಗಳನ್ನು ಸೇರಿಸಿ ಹೊಸ ಸಾಮಾಜಿಕ ಮನೋಸ್ಥಿತಿ ನಿರ್ಮಿಸಿಕೊಳ್ಳೋಣ. ಆ ಕಾರಣಕ್ಕಾಗಿ ಮಹಾತ್ಮರ Quote ಗಳಿಗೆ ನಿಮ್ಮ ಆಂತರಿಕ ಮತ್ತು ಬಾಹ್ಯ ಪ್ರತಿಕ್ರಿಯೆ ಮುಖ್ಯವಾಗುತ್ತದೆ. ಏಕೆಂದರೆ ಈ ಕ್ಷಣದಲ್ಲಿ ನಾವು ಜೀವಿಸುತ್ತಿರುವುದು ನಿಮ್ಮೊಂದಿಗೆ ಹೊರತು ಮಹಾತ್ಮರ ಒಡನಾಟದಲ್ಲಿ ಅಲ್ಲ ಆದರೆ ಅವರ ನೆನಪುಗಳೊದಿಗೆ ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…
ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…