ಸಾಮಾಜಿಕ ಜಾಲತಾಣಗಳಲ್ಲಿ, ಹೆಚ್ಚಾಗಿ ಬೆಳಗಿನ ಹೊತ್ತು ನಮಗೆ ಬರುವ ಬಹುತೇಕ Good Morning Message ಗಳು ಮಹಾನ್ ವ್ಯಕ್ತಿಗಳು ಹೇಳಿರುವ Quotation ಗಳನ್ನು ಒಳಗೊಂಡಿರುತ್ತದೆ.
ಬುದ್ದ, ಬಸವ, ಯೇಸು, ಪೈಗಂಬರ್, ಮಹಾವೀರ, ಅಂಬೇಡ್ಕರ್, ಗಾಂಧಿ, ರೂಮಿ, ಚಾಣಕ್ಯ, ಗಿಬ್ರಾನ್, ಕಾರ್ಲ್ ಮಾರ್ಕ್ಸ್, ಗಾಲಿಬ್, ಸ್ವಾಮಿ ವಿವೇಕಾನಂದ, ಪರಮಹಂಸ, ಸರ್ವಜ್ಞ, ಭಗವದ್ಗೀತೆ, ಆಚಾರ್ಯತ್ರಯರು, ಖುರಾನ್, ಬೈಬಲ್, ಶರಣರು, ದಾಸರು, ಸೂಫಿ ಸಂತರು ಹೀಗೆ ಅನೇಕರ ವಾಣಿಗಳು ನಮಗಿಷ್ಟವಾಗಿವೆ ಎಂದು ಹಾಕುತ್ತೇವೆ.
ಒಂದು ಹಂತಕ್ಕೆ ಇದೆಲ್ಲಾ ಒಳ್ಳೆಯದೆ. ಆದರೆ ಈ ಸಂದೇಶಗಳನ್ನು ಮತ್ತು ಅದನ್ನು ಹೇಳಿರುವವರನ್ನು ನಾವು ಹೇಗೆ ಅರ್ಥಮಾಡಿಕೊಂಡಿದ್ದೇವೆ, ಅದನ್ನು ಹೇಗೆ ಅಳವಡಿಸಿಕೊಂಡಿದ್ದೇವೆ, ಅದರ ಸಾಮಾಜಿಕ ಪ್ರಸ್ತುತತೆ ಏನು ಎಂಬುದನ್ನು ಅದರೊಂದಿಗೆ ಹೇಳಬೇಕಾಗುತ್ತದೆ. ಇಲ್ಲದಿದ್ದರೆ ಅದೊಂದು ಕಾಟಾಚಾರದ ಒಣ ಸಂದೇಶವಾಗುತ್ತದೆ.
ಏಕೆಂದರೆ ಕಾಲದ ನಿರಂತರತೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿರುತ್ತವೆ. ಕೆಲವು ಈಗಲೂ ಪ್ರಸ್ತುತವಾದರೆ, ಕೆಲವು ಸವಕಲು ನಾಣ್ಯಗಳು.
ಮತ್ತೆ ಕೆಲವು ಬದಲಾವಣೆಯಾಗಬೇಕಿದ್ದರೆ, ಇನ್ನೊಂದಿಷ್ಟು ಅಪಾಯಕಾರಿಯೂ ಹೌದು.
ಈ ಎಲ್ಲಾ ವ್ಯಕ್ತಿಗಳು ತಾವು ಜೀವಿಸಿದ್ದ ಕಾಲದ ಸ್ಥಿತಿಗತಿಗೆ ಅನುಗುಣವಾಗಿ ಒಂದಷ್ಟು ದೂರದೃಷಿಯಿಂದ ತಮ್ಮ ಚಿಂತನೆಗಳನ್ನು ದಾಖಲಿಸಿರುತ್ತಾರೆ. ಅದು ಈಗ ಎಷ್ಟರ ಮಟ್ಟಿಗೆ ಅಳವಡಿಕೆಗೆ ಯೋಗ್ಯ ಎಂದು ಯೋಚಿಸಬೇಕಾಗುತ್ತದೆ.
ಉದಾಹರಣೆಗೆ ಆಗ ರಾಜಪ್ರಭುತ್ವ ಈಗ ಪ್ರಜಾಪ್ರಭುತ್ವ, ಆಗ ಕಾಲ್ನಡಿಗೆ ಅಥವಾ ಕುದುರೆ.
ಈಗ ವಿಮಾನ, ಆಗ ಪಾರಿವಾಳ ಇಲ್ಲ ಧೂತ ಸಂದೇಶ ವಾಹಕ, ಈಗ ಇಂಟರ್ ನೆಟ್ – ಮೊಬೈಲ್ ( ಸ್ವಲ್ಪ Techniques ಗೊತ್ತಾದರೆ Fake Photoshop! !??). ಆಗ ಜಾತಿಗಳ ಶ್ರೇಷ್ಠತೆ ಈಗ ಸ್ವಲ್ಪ ಶಿಥಿಲತೆ, ಆಗ ಪ್ರಾಮಾಣಿಕತೆ ಈಗ ಭ್ರಷ್ಟತೆ, ಆಗ ಹೆಣ್ಣು ಎರಡನೇ ದರ್ಜೆ ಈಗ ಆಕೆಯೇ ಎಲ್ಲದರಲ್ಲೂ First Class ( ? ), ಆಗ ದೇವರು ದೊಡ್ಡವನು ಈಗ ಹಣ ಅಧಿಕಾರ ಇದ್ದವನೇ ದೇವರು ………….ಹೀಗೆ ನಾನಾ ರೀತಿಯ ಬದಲಾವಣೆಗಳಾಗಿವೆ.
ಆದ್ದರಿಂದ ಅಪ್ಪ ಹಾಕಿದ ಆಲದ ಮರವೆಂದು ನೇಣು ಹಾಕಿಕೊಳ್ಳದೆ, ಚಿನ್ನದ ಸೂಜಿಯೆಂದು ಕಣ್ಣಿಗೆ ಚುಚ್ಚಿಕೊಳ್ಳದೆ ಈಗಿರುವ ನಿಮ್ಮ ಜ್ಞಾನದ ಮಿತಿಯಲ್ಲಿ ಒಂದಷ್ಟು ವಿವೇಚನೆಯಿಂದ ನಿಮಗೆ ಸರಿ ಎಂಬುದನ್ನು ಸ್ವೀಕರಿಸಿ. ಕೆಲವನ್ನು ಬದಲಾವಣೆ ಮಾಡಿಕೊಳ್ಳಿ ಇಷ್ಟವಿಲ್ಲದಿದ್ದರೆ ತಿರಸ್ಕರಿಸಿ.
ಅನುಭವದ ಆಧಾರದ ಮೇಲೆ ಎಲ್ಲಾ ಉತ್ತಮ ಅಂಶಗಳನ್ನು ಸೇರಿಸಿ ಹೊಸ ಸಾಮಾಜಿಕ ಮನೋಸ್ಥಿತಿ ನಿರ್ಮಿಸಿಕೊಳ್ಳೋಣ. ಆ ಕಾರಣಕ್ಕಾಗಿ ಮಹಾತ್ಮರ Quote ಗಳಿಗೆ ನಿಮ್ಮ ಆಂತರಿಕ ಮತ್ತು ಬಾಹ್ಯ ಪ್ರತಿಕ್ರಿಯೆ ಮುಖ್ಯವಾಗುತ್ತದೆ. ಏಕೆಂದರೆ ಈ ಕ್ಷಣದಲ್ಲಿ ನಾವು ಜೀವಿಸುತ್ತಿರುವುದು ನಿಮ್ಮೊಂದಿಗೆ ಹೊರತು ಮಹಾತ್ಮರ ಒಡನಾಟದಲ್ಲಿ ಅಲ್ಲ ಆದರೆ ಅವರ ನೆನಪುಗಳೊದಿಗೆ ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…